LATEST NEWS
ದುಬೈ ಕರಾಮದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ; ಇಬ್ಬರು ಭಾರತೀಯರು ಮೃತ್ಯು
ದುಬೈ : ಕೊಲ್ಲಿ ರಾಷ್ಟ್ರ ದುಬೈ ಅಲ್ ಕರಾಮದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಭಾರತೀಯರು ಸಾವನ್ನಪ್ಪಿದ್ದರೆ , ಇತರ 8 ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಕರಾಮ ‘ಡೇ ಟು ಡೇ’ ಶಾಪಿಂಗ್ ಸೆಂಟರ್ ಬಳಿಯ ಬಿನ್ಹೈದರ್ ಬಿಲ್ಡಿಂಗ್ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಕೇರಳ ಮಲಪ್ಪುರಂ ಮೂಲದ ಯಾಕೂಬ್ ಅಬ್ದುಲ್ಲಾ ಮತ್ತು ತಲಶ್ಶೇರಿ ಟೆಂಪಲ್ ಗೇಟ್ನಲ್ಲಿರುವ ನಿಟ್ಟೂರು ಮನೆಯ ನಿದಿನ್ ದಾಸ್ ಅವರು ಸಾವನ್ನಪ್ಪಿದ್ದಾರೆ. ಇದೇ ವೇಳೆ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ 8 ಜನರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗುರುವಾರ ಸಂಜೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ನಿವಾಸದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಈ ಅವಘಡ ಸಂಭವಿಸಿದೆ. ಕಣ್ಣೂರು ತಲಶ್ಶೇರಿ ಪುನ್ನೋಲ್ನ 2 ಜನರ ಸ್ಥಿತಿ ಚಿಂತಾಜನಕವಾಗಿದೆ. ಮೂರು ಕೊಠಡಿಯ ಫ್ಲಾಟ್ನಲ್ಲಿ 17 ಜನರು ವಾಸಿಸುತ್ತಿದ್ದರು. ರಾತ್ರಿ, ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡಿದೆ. ಘಟನೆಯ ಕುರಿತು ಪೊಲೀಸ್ ತನಿಖೆ ಪ್ರಗತಿಯಲ್ಲಿದೆ. ಮೃತ ದೇಹಗಳನ್ನು ರಶೀದ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
You must be logged in to post a comment Login