Connect with us

    LATEST NEWS

    ಗೌರಿ ಲಂಕೇಶ್ ಹತ್ಯೆ ಪ್ರಕರಣ ಉಡುಪಿಯಲ್ಲಿ ಇಬ್ಬರನ್ನು ವಶಕ್ಕೆ ಪಡೆದ ಎಸ್ಐಟಿ

    ಗೌರಿ ಲಂಕೇಶ್ ಹತ್ಯೆ ಪ್ರಕರಣ ಉಡುಪಿಯಲ್ಲಿ ಇಬ್ಬರನ್ನು ವಶಕ್ಕೆ ಪಡೆದ ಎಸ್ಐಟಿ

    ಉಡುಪಿ ಅಗಸ್ಟ್ 9: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಾವಳಿ ಮೂಲದ ಇಬ್ಬರನ್ನು ಎಸ್ಐಟಿ ವಶಕ್ಕೆ ಪಡೆದಿದೆ.

    ಉಡುಪಿಯ ಕಾಪು ತಾಲೂಕಿನ ಪಡುಬಿದ್ರಿ ಹಿಂದೂ ಜಾಗರಣ ವೇದಿಕೆಯ ಪ್ರಮುಖ ಹಾಗೂ ಕಾಪು ಸಂಘಟನೆಯ ಪ್ರಮುಖರುಗಳಾದ ಸಂದೇಶ್ ಶೆಟ್ಟಿ ಪಾದೆಬೆಟ್ಟು (28) ಹಾಗೂ ಯುವರಾಜ್ ಕಂಚಿನಡ್ಕ(30) ಎಂಬ ಇಬ್ಬರನ್ನು ಎಸ್ಐಟಿ ವಶಕ್ಕೆ ಪಡೆದಿದೆ.

    ಬೆಂಗಳೂರಿನ ಎಸ್ಐಟಿ ಅಧಿಕಾರಿಗಳ ತಂಡ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಈ ಇಬ್ಬರು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರನ್ನು ಅವರ ಮನೆಯಲ್ಲಿ ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಇಬ್ಬರು ಗೌರಿ ಲಂಕೇಶ್ ಹತ್ಯೆ ಪ್ರಮುಖ ಆರೋಪಿಯೊಂದಿಗೆ ಲಿಂಕ್ ಹೊಂದಿದ್ದರು ಎಂಬ ಆರೋಪ ಇದ್ದು, ಈ ಬಗ್ಗೆ ತನಿಖೆ ನಡೆಯಬೇಕಿದೆ.

    ಸಂದೇಶ್‌ ಶೆಟ್ಟಿ ಪಾದೆಬೆಟ್ಟುವಿನಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಕೆಲಸ ಮಾಡುತ್ತಿದ್ದು ಈ ಹಿಂದೆ, ಪಡುಬಿದ್ರಿಯಲ್ಲಿ ಪತಂಜಲಿ ಉತ್ಪನ್ನಗಳ ಮಾರಾಟ ಮಳಿಗೆ ಇಟ್ಟುಕೊಂಡಿದ್ದರು ಎಂದು ತಿಳಿದುಬಂದಿದೆ.

    ಯುವರಾಜ್ ಕುಲಾಲ್‌ ಬೆಳ್ತಂಗಡಿಯವರಾಗಿದ್ದು, 10 ವರ್ಷಗಳಿಂದ ಪಡುಬಿದ್ರಿಯಲ್ಲೇ ನೆಲೆಸಿ, ಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದರು. ಸಂದೇಶ್‌ ಶೆಟ್ಟಿ ಹಾಗೂ ಯುವರಾಜ್‌ ಕುಲಾಲ್‌ ಆಪ್ತ ಸ್ನೇಹಿತರು ಎಂಬ ಮಾಹಿತಿ ಲಭ್ಯವಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply