Connect with us

    LATEST NEWS

    ವಿಡಿಯೋ – 6 ಜನರ ಪ್ರಾಣ ತೆಗೆದ ಓನ್ ವೇ ನಲ್ಲಿ ಬಂದ ಶಾಲಾ ಬಸ್….!!

    ಗಾಜಿಯಾಬಾದ್ ಜುಲೈ 22: ಶಾಲಾ ಬಸ್ ಮತ್ತು ಎಸ್ ಯುವಿ ನಡುವೆ ನಡೆದ ಅಪಘಾತದಲ್ಲಿ 6 ಮಂದಿ ಸಾವನಪ್ಪಿದ ಘಟನೆ ಮಂಗಳವಾರ ಬೆಳಗ್ಗೆ ಗಾಜಿಯಾಬಾದ್ ಬಳಿ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದ್ದು ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.


    ಅವಘಾತದ ವಿಡಿಯೋ ಇದೀಗ ವೈರಲ್ ಆಗಿದ್ದು, ಶಾಲಾ ಬಸ್ ನ್ನ ಚಾಲಕ ರಾಂಗ್ ರೂಟ್ ನಲ್ಲಿ ತೆಗೆದುಕೊಂಡು ಬರುತ್ತಿದ್ದು, ವೇಗದಲ್ಲಿ ಬಂದ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರು ಒಂದೇ ಕುಟುಂಬದ ಸದಸ್ಯರಾಗಿದ್ದು, ಆರು ಮಂದಿ ಸಾವನಪ್ಪಿದ್ದು,ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಬಸ್‌ನಲ್ಲಿ ಯಾವುದೇ ವಿದ್ಯಾರ್ಥಿ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

    ಬಸ್ ಚಾಲಕ ದೆಹಲಿಯ ಗಾಜಿಪುರದಿಂದ ಸಿಎನ್‌ಜಿ ಹಾಕಿಸಿ ನಂತರ ಬಸ್ ಎಕ್ಸಪ್ರೇಸ್ ವೇ ನ ಓನ್ ವೇ ನಲ್ಲಿ ಬಂದಿದ್ದಾನೆ, ಈ ವೇಳೆ ಕಾರು ಮೀರತ್‌ನಿಂದ ಗುರುಗ್ರಾಮ್‌ಗೆ ಹೋಗುತ್ತಿತ್ತು. ಬಸ್ ಚಾಲಕನ ಅಜಾಗರೂಕತೆಗೆ 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಮತ್ತು ಗಾಯಗೊಂಡವರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply