Connect with us

    BANTWAL

    ಎಸ್ ಡಿಪಿಐ ಕಾರ್ಯಕರ್ತರಿಂದ ಮುಖ್ಯಮಂತ್ರಿಗೆ ಕಪ್ಪು ಬಾವುಟ ಪ್ರದರ್ಶನ

    ಬಂಟ್ವಾಳ ಎಪ್ರಿಲ್ 13:ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಧರ್ಮಯುದ್ದಕ್ಕೆ ಸಂಬಂಧಿಸಿದಂತೆ ಸಿಎಂ ಮೌನ ಪ್ರಶ್ನಿಸಿ ಎಸ್ ಡಿಪಿಐ ಕಾರ್ಯಕರ್ತರು ಮುಖ್ಯಮಂತ್ರಿ ವಾಹನಕ್ಕೆ ಎದುರು ಕಪ್ಪು ಬಾವುಟ ಪ್ರದರ್ಶಿಸಿ ಮುತ್ತಿಗೆ ಯತ್ನಿಸಿದ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ.


    ಬಂಟ್ವಾಳದ ಬಂಟರ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಚಲಿಸುತ್ತಿದ್ದ ಸಿಎಂ ಕಾರಿಗೆ ಎಸ್‌ಡಿಪಿಐ ಕಾರ್ಯಕರ್ತರು ಗೋ ಬ್ಯಾಕ್ ಸಿಎಂ ಎಂದು ಘೋಷಣೆ ಕೂಗಿ ಮುತ್ತಿಗೆಗೆ ಯತ್ನಿಸಿದ್ದಾರೆ.

    ಕೂಡಲೇ ಮುಖ್ಯಮಂತ್ರಿ ಭದ್ರತಾ ಸಿಬ್ಬಂದಿಗಳು ಕಾರ್ಯಕರ್ತರನ್ನು ತಡೆದಿದ್ದಾರೆ. ಕೆಲವು ಎಸ್ ಡಿಪಿಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply