Connect with us

    BANTWAL

    ಶಾಲೆಗೆ ಹೊರಟಿದ್ದ ಬಾಲಕಿ ನಾಪತ್ತೆ – ದೂರು ದಾಖಲು….!!

    ಬಂಟ್ವಾಳ ನವೆಂಬರ್ 03: ಶಾಲೆಗೆಂದು ಹೋಗಿದ್ದ ಬಾಲಕಿಯೋರ್ವಳು ನಾಪತ್ತೆಯಾದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹುರುಡಿ ಗ್ರಾಮದ ನಿವಾಸಿ ಪುಟ್ಟರಾಜ್ ಅವರ ಮಗಳು ಪೃಥ್ವಿ (12) ಕಾಣೆಯಾದ ಬಾಲಕಿ.


    ಈಕೆ ಕಲ್ಲಡ್ಕದ ಅಮ್ಟೂರಿನ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದು, ಪುಟ್ಟರಾಜ್ ಅವರ ಮಗಳು ಪೃಥ್ವಿಯನ್ನು ವಿದ್ಯಾಭ್ಯಾಸದ ಸಲುವಾಗಿ ಕಲ್ಲಡ್ಕ ಶ್ರೀರಾಮ ಪ್ರಾಥಮಿಕ ಶಾಲೆಗೆ ಸೇರಿಸಿದ್ದರು. ಇಂದು ಕೂಡ ಮನೆಯಿಂದ ರಿಕ್ಷಾದಲ್ಲಿ ಶಾಲೆಗೆ ಹೋಗಿದ್ದಳು. ಆದರೆ ಬಾಲಕಿ ಶಾಲೆಗೆ ಬಾರದೆ ಇದ್ದುದರಿಂದ ಶಾಲಾ ಶಿಕ್ಷಕಿ ಮನೆಯವರಿಗೆ ಪೋನ್ ಮಾಡಿ ತಿಳಿಸಿದ್ದಾರೆ. ಶಾಲೆಗೆಂದು ಹೋದವಳು ಶಾಲೆಗೆ ಹೋಗದೆ ಕಾಣೆಯಾದ ಬಗ್ಗೆ ಗಾಬರಿಗೊಂಡ ಪೋಷಕರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply