LATEST NEWS
ಕಾಲುಸಂಕ ದಾಟುವಾಗ ಆಯತಪ್ಪಿ ಬಿದ್ದ ಬಾಲಕಿ ನೀರುಪಾಲು
ಬೈಂದೂರು ಅಗಸ್ಟ್ 08: ಕಾಲುಸಂಕ ದಾಟುವಾಗ ಆಯತಪ್ಪಿ ಬಿದ್ದು 2ನೇ ತರಗತಿಯ ವಿಧ್ಯಾರ್ಥಿನಿ ನೀರುಪಾಲಾದ ಘಟನೆ ಕಾಲ್ತೋಡು ಗ್ರಾಮದಲ್ಲಿ ಇಂದು ನಡೆದಿದೆ.
ನೀರು ಪಾಲಾದ ಬಾಲಕಿಯನ್ನು ಬೊಳಂಬಳ್ಳಿಯ ಮಕ್ಕಿಮನೆ ಮನೆ ಪ್ರದೀಪ್ ಪೂಜಾರಿ ಪುತ್ರಿ ಸನ್ನಿಧಿ ಎಂದು ಗುರುತಿಸಲಾಗಿದೆ. ಚಪ್ಪರಿಕೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿರುವ ಸನ್ನಿಧಿ ಸೋಮವಾರ ಸಂಜೆ ಶಾಲೆಬಿಟ್ಟು ಮನೆಗೆ ಬರುವಾಗ ಬೀಜಮಕ್ಕಿ ಎಂಬಲ್ಲಿರುವ ಕಾಲು ಸಂಕದಾಟುವಾಗ ಆಯತಪ್ಪಿ ಬಿದ್ದಿದ್ದಾಳೆ.
ಆದರೆ ಮಳೆಯಿಂದ ಈ ಹಳ್ಳದಲ್ಲಿ ನೀರು ರಭಸದಿಂದ ಹರಿಯುತ್ತಿದ್ದು, ಬಾಲಕಿ ನೀರಿನ ಸೆಳೆತಕ್ಕೆ ಬಾಲಕಿ ಕೊಚ್ಚಿಕೊಂಡು ಹೋಗಿದ್ದಾಳೆ. ಸ್ಥಳೀಯರು ಬಾಲಕಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
You must be logged in to post a comment Login