LATEST NEWS
ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಫಿ ತೆಗೆಯಲು ಹೋಗಿ ಯುವಕರಿಬ್ಬರು ನೀರುಪಾಲು
ಉಡುಪಿ ಎಪ್ರಿಲ್ 18 : ಉಡುಪಿ ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಪಿ ತೆಗೆಯಲು ಹೋಗಿ ಆಯತಪ್ಪಿ ಸಮುದ್ರಕ್ಕೆ ಬಿದ್ದು ಇಬ್ಬರು ಇಂಜಿನಿಯರಿಂಗ ವಿಧ್ಯಾರ್ಥಿಗಳು ಸಾವನಪ್ಪಿದ್ದಾರೆ. ಮೃತರನ್ನು ಬಂದಿದ್ದ ಬೆಂಗಳೂರಿನ GKVK ಕೃಷಿ ಕಾಲೇಜಿನ ವಿಧ್ಯಾರ್ಥಿಗಳು ಎಂದು ಗುರುತಿಸಲಾಗಿದ್ದು, ಇಬ್ಬರ ಹೆಸರೂ ಸತೀಶ್ ಎಂದು ತಿಳಿದು ಬಂದಿದೆ.
ಬೆಂಗಳೂರಿನ GKVK ಕೃಷಿ ಕಾಲೇಜಿನಿಂದ ಸುಮಾರು 68 ವಿಧ್ಯಾರ್ಥಿಗಳು ಪ್ರವಾಸಕ್ಕೆ ಆಗಮಿಸಿದ್ದರು ಎಂದು ಹೇಳಲಾಗಿದ್ದು, ಸೈಂಟ್ ಮೇರಿ ದ್ವೀಪದ ಅಪಾಯಕಾರಿ ಪ್ರದೇಶದಲ್ಲಿ ಲೈಫ್ ಗಾರ್ಡ್ ಗಳ ಸೂಚನೆ ಮೀರಿ ಯುವಕರು ಸೆಲ್ಪಿ ತೆಗೆಯಲು ತೆರಳಿದ್ದಾರೆ. ಈ ಸಂದರ್ಭ ಆಯತಪ್ಪಿ ಸಮುದ್ರಕ್ಕೆ ಬಿದ್ದಿದ್ದು, ನೀರು ಪಾಲಾಗಿದ್ದಾರೆ. ಓರ್ವನ ಶವವನ್ನು ಲೈಫ್ ಗಾರ್ಡ್ ಸಿಬ್ಬಂದಿ ಗಳು ತೆಗೆದಿದ್ದು, ನೀರು ಪಾಲದ ಮತ್ತೊಬ್ಬ ಯುವಕನಿಗೆ ಶೋಧ ಕಾರ್ಯ ಮುಂದುವರೆಸಿದ್ದಾರೆ.
You must be logged in to post a comment Login