DAKSHINA KANNADA
ವಿಟ್ಲದಲ್ಲಿ ಸಾರ್ವಜನಿಕರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಆಡು ಕಳ್ಳರು
ವಿಟ್ಲ ಡಿಸೆಂಬರ್ 31: ಮೇಯುತ್ತಿದ್ದ ಆಡುಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಯುವಕರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಘಟನೆ ವಿಟ್ಲದಲ್ಲಿ ನಡೆದಿದೆ.
ಬಂದಿತರನ್ನು ಸಾಲೆತ್ತೂರು ನಿವಾಸಿಗಳಾದ ಅಜೀಮ್ (19), ಅನಸ್ (19) ಎಂದು ಗುರುತಿಸಲಾಗಿದೆ. ಆರೋಪಿಗಳು ಪೆರುವಾಯಿ, ಅಡ್ಯನಡ್ಕ, ಕೇಪು, ಮರಕ್ಕಿಣಿ, ಅಳಿಕೆ ಮುಂತಾದ ಪ್ರದೇಶಗಳಿಂದ ಗುಡ್ಡಕ್ಕೆ ಮೇಯಲೆಂದು ಬಿಡುತ್ತಿದ್ದ ಆಡುಗಳನ್ನು ಕಳ್ಳತನ ಮಾಡುತ್ತಿದ್ದರು. ಮೇಯಲು ಬಿಟ್ಟಿದ್ದ ಆಡುಗಳ ಸಂಖ್ಯೆಯಲ್ಲಿ ಕಡಿಮೆಯಾಗುತ್ತಿರುವ ಹಿನ್ನಲೆ ಆಡುಗಳ ನಾಪತ್ತೆ ಹಿಂದೆ ಖದೀಮರ ಕೈಚಳಕವನ್ನು ಪತ್ತೆ ಹಚ್ಚುವ ಸಲುವಾಗಿ ಆಡು ಮಾಲಕರು ಕಾಯುತ್ತಿದ್ದರು.
ಶುಕ್ರವಾರ ಮುಂಜಾನೆ ಕಳ್ಳರ ಪತ್ತೆಗಾಗಿ ಮಾಲಕರು ಕಾಯುತ್ತಿದ್ದ ವೇಳೆ ಕೇಪು ಕಲ್ಲಂಗಳ ದ್ವಾರದ ಸಮೀಪ ಆಡು ಕಳ್ಳರಿಬ್ಬರು ಸಾರ್ವಜನಿಕರಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.ಕೂಡಲೇ ಇಬ್ಬರನ್ನು ಹಿಡಿದುಕೊಂಡು ಸಾರ್ವಜನಿಕರು ಪೊಲೀಸರಿಗೊಪ್ಪಿಸಿದ್ದಾರೆ. ಆದರೆ ಠಾಣೆಯಲ್ಲಿ ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
You must be logged in to post a comment Login