Connect with us

    LATEST NEWS

    ಚಿನ್ನದ ಸರ ಕದ್ದ ಅಂತರಾಜ್ಯ ಕಳ್ಳನ ಬಂಧಿಸಿದ ಉಡುಪಿ ಪೊಲೀಸರು…!!

    ಉಡುಪಿ ಅಕ್ಟೋಬರ್ 29: ಉಡುಪಿ ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಕದ್ದ ಕಳ್ಳನನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ದಾಂಡೇಲಿಯ ಪಟೇಲ್​​​ ನಗರದ ನಿವಾಸಿ ಮೌಲಾಲಿ ಜಮಾದಾರ್ ಎಂದು ಗುರುತಿಸಲಾಗಿದೆ. ಈತ ಅಕ್ಟೋಬರ್ 3ರಂದು ಉಡುಪಿಯ ಕಡಿಯಾಳಿ ಮಹಿಷಮರ್ಧಿನಿ ದೇವಾಸ್ಥಾನದಲ್ಲಿ ಚಂಡಿಕಾ ಹೋಮ ಮುಗಿಸಿ ತೆರಳುತ್ತಿದ್ದ ಪ್ರೇಮ ಎಂಬುವರ ಕೊರಳಲ್ಲಿದ್ದ ಚಿನ್ನದ ಸರವನ್ನು ಮೌಲಾಲಿ ಜಮಾದಾರ್ ಕಿತ್ತುಕೊಂಡು ಪರಾರಿಯಾಗಿದ್ದ.


    ಈ ಬಗ್ಗೆ ಪ್ರೇಮಾ, ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕಳ್ಳನಿಗಾಗಿ ಬಲೆ ಬೀಸಿದ ಪೊಲೀಸರು, ದೇವಸ್ಥಾನದಲ್ಲಿದ್ದ ಸಿಸಿ ಟಿವಿ ದೃಶ್ಯಾವಳಿಗಳು ಮತ್ತು ಮೊಬೈಲ್ ಟವರ್​​​ ಲೊಕೇಷನ್​ ಆಧಾರಿಸಿ ತನಿಖೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
    ಕದ್ದ ಸರವನ್ನು ಆರೋಪಿಯು ಧಾರವಾಡದ ಟೋಲ್ ನಾಕಾ ಬಳಿಯ ಚಿನ್ನದ ಅಂಗಡಿಯೊಂದಕ್ಕೆ ಮಾರಿದ್ದ. ವಿಷಯ ಗೊತ್ತಾಗುತ್ತಿದ್ದಂತೆ ಈತನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ನಂತರ ಈತನೊಬ್ಬ ಅಂತರ್​ ರಾಜ್ಯ ಕಳ್ಳ ಎಂಬುದೂ ಬಯಲಾಗಿದೆ. ಈತನ ವಿರುದ್ಧ ಕರ್ನಾಟಕ ಮತ್ತು ಗೋವಾದಲ್ಲಿ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಆರೋಪಿಯಿಂದ 3 ಲಕ್ಷ ಮೌಲ್ಯದ 63 ಗ್ರಾಂ ತೂಕದ‌ ಚಿನ್ನವನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply