ಹಾವೇರಿ, ಮಾರ್ಚ್ 13: ಅಡಮಾನಕ್ಕೆ ಇಟ್ಟಿದ್ದ ಚಿನ್ನದ ಸರವನ್ನು ಬಿಡಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಸಾರಿಗೆ ಬಸ್ನಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಕಳ್ಳತನವಾಗಿದ್ದು, ಕಳ್ಳತನವಾದ ಸರವನ್ನು ಪತ್ತೆಹಚ್ಚಿಕೊಡಬೇಕೆಂದು ಮಹಿಳೆ ಬಸ್ ಸಮೇತವಾಗಿ ಪೊಲೀಸ್ ಠಾಣೆಗೆ ಬಂದಿರುವ ಘಟನೆ ಹಾವೇರಿ ನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ.

ಹಾನಗಲ್ ತಾಲ್ಲೂಕಿನ ಹಿರೇಬಾಸೂರು ಗ್ರಾಮದ ನಿವಾಸಿ ಮೀನಾಕ್ಷಿ ಕಾಗಿನೆಲೆ ಅವರು ಸುಮಾರು 10 ಗ್ರಾಂ ತೂಕದ ಚಿನ್ನದ ಸರ ಕಳೆದುಕೊಂಡ ಮಹಿಳೆ ಎಂದು ತಿಳಿದುಬಂದಿದೆ. ಮಾಹಿತಿಯ ಪ್ರಕಾರ, ಮೀನಾಕ್ಷಿ ಅವರು ಅಡಮಾನಕ್ಕೆ ಇಟ್ಟಿದ್ದ ಚಿನ್ನದ ಸರವನ್ನು ಬಿಡಿಸಿಕೊಂಡು ಮನೆಗೆ ಹೋಗುವ ಸಲುವಾಗಿ ಸಾರಿಗೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರ ಚಿನ್ನದ ಸರ ಕಳ್ಳತನವಾಗಿರುವುದು ಗಮನಕ್ಕೆ ಬಂದಿದೆ ಎಂದು ಹೇಳಲಾಗಿದೆ. ಘಟನೆಯ ಬಳಿಕ, ತನ್ನ ಚಿನ್ನದ ಸರವನ್ನು ಪತ್ತೆಹಚ್ಚಿ ಕೊಡಬೇಕೆಂದು ಮಹಿಳೆ ಪ್ರಯಾಣಿಸುತ್ತಿದ್ದ ಬಸ್ನೊಂದಿಗೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.