PUTTUR
ತನ್ನ ಮನೆಯಲ್ಲೆ ಚಿನ್ನ ಕದ್ದು..ಪೊಲೀಸರಿಗೆ ಸಿಕ್ಕಿಬಿದ್ದ ಮನೆಯೊಡತಿ
ಪುತ್ತೂರು ಜೂನ್ 27: ಮೂರು ದಿನಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ ಈ ಬಾರಿ ಕಳ್ಳತನ ನಡೆಸಿದ್ದು ಮಾತ್ರ ಮನೆಯ ಒಡತಿ. ಇದೆ ತಿಂಗಳ 24 ರಂದು ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕಳ ಗ್ರಾಮದ ಪುಳಿಮಜಲು ನಿವಾಸಿ ಪುರುಷೋತ್ತಮ ಗೌಡ ಎಂಬವರ ನಿವಾಸದಿಂದ ಕಳ್ಳರು ಸುಮಾರು 60 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳ್ಳತನ ನಡೆಸಿದ್ದಾರೆ ಎಂದು ಪ್ರಕರಣ ದಾಖಲಾಗಿತ್ತು.
ಪ್ರಕರಣದ ಬೆನ್ನತ್ತಿದ ಪೊಲೀಸರು ತನಿಖೆ ನಡೆಸಿದಾಗ ಪುರುಷೋತ್ತಮ ಗೌಡ ಅವರ ಹೆಂಡತಿ ಮಮತ ಎಂಬವರೇ ಈ ಕಳ್ಳತನ ನಡೆಸಿರುವ ಬಗ್ಗೆ ದೃಢವಾಗಿತ್ತು. ಪುರುಷೋತ್ತಮ ಗೌಡರವರ ಪತ್ನಿ ಮಮತ ವೈಯಕ್ತಿಕ ಹಣಕಾಸಿನ ವ್ಯವಹಾರದ ನಿಮಿತ್ತ ಸದರಿ ಆಭರಣಗಳನ್ನು ಕಳ್ಳತನ ಮಾಡಿದ್ದು, ನಂತರ ತನ್ನ ಪತಿ ಬಳಿ ಆಭರಣ ಕಳ್ಳತನವಾಗಿರುವುದಾಗಿ ಎಂದು ಸುಳ್ಳು ಮಾಹಿತಿ ನೀಡಿದ್ದರು. ಆದರೆ ಪೊಲೀಸ್ ತನಿಖೆಯ ವೇಳೆ ಸದರಿ ಆರೋಪಿ ಮಮತ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಪ್ರಸ್ತುತ ಆರೋಪಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿರುತ್ತದೆ.
Facebook Comments
You may like
ಅಪ್ರಾಪ್ತ ಬಾಲಕಿ ಮೇಲೆ ಸ್ವಂತ ಅಣ್ಣ ಹಾಗೂ ದೊಡ್ಡಪ್ಪನಿಂದ ಅತ್ಯಾಚಾರ
ಡಿಜಿಟಲ್ ಇಂಡಿಯಾದಲ್ಲಿ ಒಂದು ಆಧಾರ್ ಕಾರ್ಡ್ ಬರಲು ಬೇಕಾದ ಸಮಯ ಬರೋಬ್ಬರಿ 5 ವರ್ಷ…!!
ಕಟೀಲು ದೇವಸ್ಥಾನಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದ ನಟ ವಿಜಯ ರಾಘವೇಂದ್ರ
ಮನೆ ಛಾವಣಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ..!
ಲಂಚ ಸ್ವೀಕಾರ ಸಾಬೀತು – ಬೆಳ್ತಂಗಡಿ ಠಾಣಾ ಹೆಡ್ ಕಾನ್ಸ್ಟೇಬಲ್ ಪ್ರಕಾಶ್ಗೆ 3 ವರ್ಷ ಶಿಕ್ಷೆ
ಭಗವತಿ ತೈಯ್ಯಂ ಮಡಿಲಲ್ಲಿ ಬೆಚ್ಚಗೆ ಕುಳಿತ ಮಗು..ಮಗುವಿನ ಮುಗ್ದತೆಗೆ ಮಾರು ಹೋದ ಜನ
You must be logged in to post a comment Login