LATEST NEWS
ಜ್ಯೋತಿಷಿ ಮಾತು ಕೇಳಿ ಪ್ರಿಯಕರನ ವಿಷ ಕೊಟ್ಟು ಕೊಲೆ ಮಾಡಿದ್ಲು…..!!

ಕೇರಳ ಅಕ್ಟೋಬರ್ 31: ಜ್ಯೋತಿಷಿ ಹೇಳಿದ ಮಾತು ಕೇಳಿ ಹುಡುಗಿಯೊಬ್ಬಳು ತನ್ನ ಪ್ರಿಯಕನಿಗೆ ವಿಷಪ್ರಾಶನ ಮಾಡಿ ಸಾಯಿಸಿರುವ ಘಟನೆ ಕೇರಳದ ತಿರುವನಂತಪುರಂ ನಲ್ಲಿ ನಡೆದಿದೆ. ಮೃತದುರ್ದೈವಿಯನ್ನು ರೇಡಿಯಾಲಜಿ ವಿದ್ಯಾರ್ಥಿ ಶರೋನ್ ರಾಜ್ (23) ಎಂದು ಗುರುತಿಸಲಾಗಿದ್ದು, ಅಕ್ಟೋಬರ್ 25ರಂದು ಈತ ಮೃತಪಟ್ಟಿದ್ದಾನೆ.
ಆರೋಪಿಯನ್ನು ಗ್ರೀಷ್ಮಾ ಎಂದು ಗುರುತಿಸಲಾಗಿದ್ದು, ಈಕೆ ಶರೋನ್ ರಾಜ್ ಜೊತೆ ರಿಲೇಶ್ ನ ಶಿಪ್ ನಲ್ಲಿದ್ದಳು, ಅಲ್ಲದೇ ಜ್ಯೋತಿಷಿ ಒಬ್ಬರು ಗ್ರೀಷ್ಮಾ ಜಾತಕದ ಪ್ರಕಾರ, ಆಕೆಯ ಮೊದಲ ಪತಿ ಸಾಯುತ್ತಾನೆ ಎಂದು ಹೇಳಿದ್ದರು. ಇದರಿಂದ ಭಯಗೊಂಡು ಆತನೊಂದಿಗೆ ಬ್ರೇಕ್ ಮಾಡಿಕೊಳ್ಳಲು ಪ್ರಯತ್ನಿಸಿದಳು.

ಗ್ರೀಷ್ಮಾ ಮತ್ತು ಶರೋನ್ ಒಂದು ವರ್ಷದಿಂದ ರಿಲೇಶನ್ ಶಿಪ್ನಲ್ಲಿದ್ದರು. ಅಲ್ಲದೇ ಮನೆಯವರು ಗ್ರೀಷ್ಮಾಗೆ ಬೇರೆಯವರೊಂದಿಗೆ ಮದುವೆ ನಿಶ್ಚಯ ಮಾಡಿದ್ದರು. ಫೆಬ್ರವರಿಯಿಂದ ಗ್ರೀಷ್ಮಾ ಹಾಗೂ ಶರೋನ್ ನಡುವೆ ಕೆಲವು ಮನಸ್ತಾಪಗಳು ಪ್ರಾರಂಭವಾಯಿತು. ಹೀಗಿದ್ದರೂ ಇಬ್ಬರೂ ರಿಲೇಶನ್ ಶಿಪ್ ಮಂದುವರೆಸಿದರು. ಆದರೆ ಇತ್ತೀಚೆಗೆ ಇವರಿಬ್ಬರ ನಡುವೆ ಮನಸ್ತಾಪ ಹೆಚ್ಚಾಗಿದ್ದರಿಂದ ಶರೋನ್ ಅನ್ನು ಬಿಡುವ ಸಲುವಾಗಿ, ವಿಷ ನೀಡಿ ಕೊಲ್ಲಲು ನಿರ್ಧರಿಸಿದಳು. ಮೊದಲಿಗೆ ಸಮಾಧಾನದಿಂದ ಮೃದು ಸ್ವಭಾವದಿಂದ ಬ್ರೇಕ್ ಅಪ್ ಮಾಡಿಕೊಳ್ಳೋಣ ಎಂದು ತಿಳಿಸಿದಳು. ಆದರೆ ಇದಕ್ಕೆ ಶರೋನ್ ರಾಜ್ ನಿರಾಕರಿಸಿದ್ದಾನೆ.
ಕೊಲೆ ಮಾಡಲು ಮೊದಲೇ ಪ್ರೀ ಪ್ಲಾನ್ ಮಾಡಿದ್ದ ಗ್ರೀಷ್ಮಾ ಅಕ್ಟೋಬರ್ 14 ರಂದು ಶರೋನ್ ರಾಜ್ ಅನ್ನು ಮನೆಗೆ ಕರೆಸಿಕೊಂಡಿದ್ದಳು. ಈ ವೇಳೆ ಕಷಾಯದೊಂದಿಗೆ ಕೀಟನಾಶಕವನ್ನು ಬೆರೆಸಿ ಕುಡಿಸಿದ್ದಾಳೆ. ಇದಾದ ಬಳಿಕ ಪ್ರಿಯಕರ ವಾಂತಿ ಮಾಡಿಕೊಳ್ಳಲು ಆರಂಭಿಸಿ, ಬಳಿಕ ಸ್ನೇಹಿತನೊಂದಿಗೆ ತೆರಳಿದನು. ಅಕ್ಟೋಬರ್ 25 ರಂದು ಶರೋನ್ ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟನು. ಆತನ ಸಾವಿಗೆ ಪ್ರೇಯಸಿಯೇ ಕಾರಣ ಎಂದು ಶರೋನ್ ಕುಟುಂಬಸ್ಥರು ಆರೋಪಿಸಿದ್ದಾರೆ.