Connect with us

    LATEST NEWS

    ಗುರುಗ್ರಾಮ್ – ಚಲಿಸುತ್ತಿದ್ದ ಬಸ್ ಗೆ ಬೆಂಕಿ – ಇಬ್ಬರು ಸಜೀವ ದಹನ

    ಗುರುಗ್ರಾಮ್ ನವೆಂಬರ್ 09: ಚಲಿಸುತ್ತಿದ್ದ ಬಸ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ ನಲ್ಲಿ ಇಬ್ಬರು ಸಜೀವ ದಹನವಾಗಿದ್ದು 12 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಜೈಪುರ-ದೆಹಲಿ-ಗುರುಗ್ರಾಮ್ ಎಕ್ಸ್‌ಪ್ರೆಸ್‌ವೇಯಲ್ಲಿ ನಿನ್ನೆ ಬುಧವಾರ ರಾತ್ರಿ ನಡೆದಿದೆ. ಬೆಂಕಿಯಿಂದ ಬಸ್ ಸುಟ್ಟು ಕರಕಲಾಗಿದೆ. ಬೆಂಕಿ ಅವಘಡಕ್ಕೆ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ.


    ದೆಹಲಿಯಿಂದ ರಾಜಸ್ಥಾನದ ಜೈಪುರಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿರುವ ಝಾರ್ಸಾ ಮೇಲ್ಸೇತುವೆ ಬಳಿ ಕಳೆದ ರಾತ್ರಿ 8:30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅಗ್ನಿಶಾಮಕ ಇಲಾಖೆ ಉಪನಿರ್ದೇಶಕ ಗುಲ್ಶನ್ ಕಲ್ರಾ ತಿಳಿಸಿದ್ದಾರೆ. ಎಆರ್ 01 ಕೆ 7707 ನೋಂದಣಿ ಸಂಖ್ಯೆ ಹೊಂದಿರುವ ಸ್ಲೀಪರ್ ಬಸ್ ಕ್ಯಾರೇಜ್‌ವೇಯಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂಬ ಮಾಹಿತಿಯನ್ನು ನಾವು ಪಡೆದ ನಂತರ ಮೂರು ಅಗ್ನಿಶಾಮಕ ಟೆಂಡರ್‌ಗಳನ್ನು ಸ್ಥಳಕ್ಕೆ ಕಳುಹಿಸಿದೆವು ಎಂದು ಪೊಲೀಸ್ ಅಧಿಕಾರಿ ಕಲ್ರಾ ತಿಳಿಸಿದ್ದಾರೆ. ಬೆಂಕಿಯನ್ನು ಹತೋಟಿಗೆ ತರುವಷ್ಟರಲ್ಲಿ ಇಬ್ಬರು ಪ್ರಯಾಣಿಕರು ಸುಟ್ಟು ಕರಕಲಾದರು.

    ಇತರ ಕೆಲವು ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿವೆ. ಗಾಯಗೊಂಡಿರುವ ಏಳು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಿವಿಲ್ ಆಸ್ಪತ್ರೆಯ ಡಾ.ಮಾನವ್ ಖಚಿತಪಡಿಸಿದ್ದಾರೆ. ಎಲ್ಲಾ ಗಾಯಗೊಂಡವರು ಶೇಕಡಾ 30 ರಿಂದ 50ರಷ್ಟು ಸುಟ್ಟುಗಾಯಗೊಂಡಿದ್ದಾರೆ, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಾನವ್ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply