Connect with us

    LATEST NEWS

    ಗುರುಪುರ ಅಡ್ಡೂರು ಸೇತುವೆಯಲ್ಲಿ ಘನವಾಹನ ಸಂಚಾರಕ್ಕೆ ನಿರ್ಬಂಧ – ಮಾರ್ಗ ಬದಲಾವಣೆ

    ಮಂಗಳೂರು ಅಗಸ್ಟ್ 16: : ಮಂಗಳೂರು ತಾಲೂಕಿನ ಸುರತ್ಕಲ್- ಕಬಕ ರಾಜ್ಯ ಹೆದ್ದಾರಿ 101 ರ ಕಿ. ಮೀ 29.35 ರಲ್ಲಿನ ಅಡ್ಡೂರು ಸೇತುವೆ ದುಸ್ಥಿತಿಯಲ್ಲಿದ್ದು ವಾಹನ ಸಂಚಾರಕ್ಕೆ ಅಪಾಯಕಾರಿ ಯಾಗಿರುವುದರಿಂದ ಮುಂದಿನ ಆದೇಶದವರೆಗೆ ಈ ಸೇತುವೆಯಲ್ಲಿ ಘನ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ ಹಾಗೂ ಸಂಚಾರ ಮಾರ್ಗ ಬದಲಾವಣೆ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಆದೇಶಿಸಿದ್ದಾರೆ.


    ಅಡ್ಡೂರು ಸೇತುವೆಯ ಮೂಲಕ ಸುರತ್ಕಲ್ – ಕಬಕ ರಾಜ್ಯ ಹೆದ್ದಾರಿ 101 ರ ರಸ್ತೆಯಲ್ಲಿ ಬಿಸಿ.ರೋಡ್-ಪೊಳಲಿ- ಬೆಂಗಳೂರಿಗೆ ಸಂಚರಿಸುವ ಘನ ವಾಹನಗಳು ಬದಲಿ ರಸ್ತೆಯನ್ನು ಬಳಸಿಕೊಂಡು ಸಂಚರಿಸಬಹುದಾಗಿದೆ.

    ಮಂಗಳೂರು- ಗುರುಪುರ ಕೈಕಂಬ ಕಡೆಯಿಂದ ಪೊಳಲಿ ಕಡೆಗೆ ಸಂಚರಿಸುವ ವಾಹನಗಳು :- ಮಂಗಳೂರು- ಸೋಲಾಪುರ್ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಬೈತುರ್ಲಿ ಬಸ್ ಸ್ಟಾಪ್ ನಿಂದ ಬೈತುರ್ಲಿ – ನೀರು ಮಾರ್ಗ – ಕಲ್ಪನೆ – ಜಿಲ್ಲಾ ಮುಖ್ಯ ರಸ್ತೆಯ ಮೂಲಕ ಕಲ್ಪನೆ ಜಂಕ್ಷನ್‍ಗೆ ಬಂದು ಸುರತ್ಕಲ್ – ಕಬಕ ರಾಜ್ಯ ಹೆದ್ದಾರಿ 101 ನ್ನು ಸಂಪರ್ಕಿಸಿ, ಪೆÇಳಲಿ ಹಾಗೂ ಬಿಸಿ.ರೋಡ್ ನ ಎನ್‍ಎಚ್ ಗೆ ಸಂಚರಿಸಬೇಕು.
    ಬಿಸಿ.ರೋಡ್-ಪೊಳಲಿ ಕಡೆಯಿಂದ ಮಂಗಳೂರು-ಗುರುಪುರ ಕೈಕಂಬ ಕಡೆಗೆ ಸಂಚರಿಸುವ ವಾಹನಗಳು :- ಸುರತ್ಕಲ್ – ಕಬಕ ರಾಜ್ಯ ಹೆದ್ದಾರಿ 101 ರ ಕಲ್ಪನೆ-ನೀರುಮಾರ್ಗ- ಬೈತುರ್ಲಿ ಜಿಲ್ಲಾ ಮುಖ್ಯ ರಸ್ತೆಯ ಕಲ್ಪನೆ ರಸ್ತೆಯ ಮೂಲಕ ಬೈತುರ್ಲಿ ಬಸ್‍ಸ್ಟಾಪ್ ಎಂಬಲ್ಲಿ ಮಂಗಳೂರು- ಸೋಲಾಪುರ್- ರಾಷ್ಟ್ರೀಯ ಹೆದ್ದಾರಿ 169 ನ್ನು ಸಂಪರ್ಕಿಸಿ ಮಂಗಳೂರು ಗುರುಪುರ ಕೈಕಂಬ ಕಡೆಗೆ ಸಂಚರಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply