Connect with us

    LATEST NEWS

    ಏಕವಚನದಲ್ಲಿ ಕರೆದ ಸಿದ್ದರಾಮಯ್ಯ ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಹಾಲಾಡಿ ಶ್ರೀನಿವಾಸ ಶೆಟ್ಟಿ

    ಏಕವಚನದಲ್ಲಿ ಕರೆದ ಸಿದ್ದರಾಮಯ್ಯ ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಹಾಲಾಡಿ ಶ್ರೀನಿವಾಸ ಶೆಟ್ಟಿ

    ಉಡುಪಿ ಅಕ್ಟೋಬರ್ 27: ಬೈಂದೂರು ಚುನಾವಣಾ ಪ್ರಚಾರ ಸಭೆಯಲ್ಲಿ ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ವಿರುದ್ದ ಏಕವಚನದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ಕಿಡಿಕಾರಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ವಿರುದ್ದ ಏಕವಚನದಲ್ಲಿ ಹಗುರವಾಗಿ ಮಾತನಾಡುತ್ತಾರೆ ಏಕವಚನದಲ್ಲಿ ಮಾತನಾಡುವಷ್ಟು ನನಗೆ ಅವರ ಜೊತೆ ಸಲಿಗೆ ಇಲ್ಲ, ಸಲಿಗೆ ಇದ್ದವರಲ್ಲಿ ಅವರು ಮಾತನಾಡಲಿ ಇದು ಒಬ್ಬ ಮಾಜಿ ಮುಖ್ಯಮಂತ್ರಿಗೆ ಇದು ಶೋಭೆಯಲ್ಲ ಎಂದು ಹೇಳಿದ್ದಾರೆ.

    ನಾನು ಹಲವಾರು ಬಾರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದೇನೆ. ಕಾಂಗ್ರೆಸ್ ಸೇರುವಂತೆ ಸಿದ್ದರಾಮಯ್ಯ ಒತ್ತಾಯಿಸಿದ್ರು ನಾನು ಸೇರುವುದಿಲ್ಲ ಅಂತ ನೇರವಾಗಿ ಹೇಳಿದ್ದೆ. ಚುನಾವಣಾ ಪ್ರಚಾರದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಮುಖವನ್ನೇ ನೋಡಿಲ್ಲ ಎಂದು ಹೇಳಿದ ಸಿದ್ದರಾಮಯ್ಯ ನಾನು ಯಾರು ಅಂತ ಗೊತ್ತಿಲ್ಲದೆ ಅವರು ಪಕ್ಷಕ್ಕೆ ಸೇರಿಸಿಕೊಳ್ಳಲು ಮುಂದಾದ್ರಾ? ನನ್ನ ವ್ಯಕ್ತಿತ್ವ ಗೊತ್ತಿಲ್ಲದೆ ಏನೂಂತ ಪಕ್ಷಕ್ಕೆ ಸೇರಿಸಲು ಮುಂದಾಗಿದ್ದರು ಎಂದು ಪ್ರಶ್ನೆ ಮಾಡಿದ್ದಾರೆ.

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತಿಂದ ಕ್ಷೇತ್ರದ ಮತದಾರರಿಗೆ ಬಹಳ ಬೇಸರ ಆಗಿದೆ. ನಾನು ರಾಜಕೀಯವಾಗಿಯೂ ಹಗುರವಾಗಿ ಮಾತನಾಡುವ ವ್ಯಕ್ತಿ ಅಲ್ಲ ಎಂದು ಹೇಳಿದರು.

    ಒಂದು ಹುದ್ದೆಗೆ ಹೋದ ಕೂಡಲೇ ದೊಡ್ಡ ಮನುಷ್ಯ ಆಗಲ್ಲ, ಆತನ ಮಾತು ನಡವಳಿಗೆ ಸರಿ ಇರಬೇಕು, ನಾನು ಸಿದ್ದರಾಮಯ್ಯ ನ ಆಶೀರ್ವಾದದಲ್ಲಿ ಬದುಕಿದವ ಅಲ್ಲ, ನನಗೆ ಜನ 56 ಸಾವಿರ ಮತದ ಅಂತರದಲ್ಲಿ ಗೆಲ್ಲಿಸಿದ್ದಾರೆ. ನನಗೆ ಸಿದ್ದರಾಮಯ್ಯ ಆಶೀರ್ವಾದ ಬೇಕಾಗಿಲ್ಲ. ಕುಂದಾಪುರ ಕ್ಷೇತ್ರದ ಜನರ ಪ್ರೀತಿ ಸಾಕು. ಉಡುಪಿಯಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ತಿರುಗೇಟು ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply