Connect with us

    LATEST NEWS

    ಉಡುಪಿ – ನೇಣು ಬಿಗಿದು ವಲಸೆ ಕಾರ್ಮಿಕ ಆತ್ಮಹತ್ಯೆ

    ಉಡುಪಿ. ಮೇ.30: ವಲಸೆ ಕಾರ್ಮಿಕನೊಬ್ಬ ತಾನು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಪುತ್ತೂರು ಮೆಸ್ಕಾಂ ಕಛೇರಿ ಬಳಿ ನಡೆದಿದೆ.


    ಮೃತನನ್ನು ಬಾಗಲಕೋಟೆ ಜಿಲ್ಲೆಯ ಗ್ಯಾನಪ್ಪ ನರಿಯಪ್ಪ ಕುರಿ(23ವ) ಎಂದು ಗುರುತಿಸಲಾಗಿದೆ. ಮನೆಯ ಜಂತಿಗೆ ಚೂಡಿದಾರದ ಶಾಲು ಬಳಸಿಕೊಂಡು, ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು, ಶವಪರೀಕ್ಷೆಗೆ ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಲು, ಉಚಿತ ಅಂಬುಲೇನ್ಸ್ ಸೇವೆಯನ್ನು ನೀಡಿ ಇಲಾಖೆಗೆ ಸಹಕರಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply