Connect with us

LATEST NEWS

5 ವರ್ಷದ ಮಗನನ್ನು ನೇಣು ಬಿಗಿದು ಕೊಂದು ಆತ್ಮಹತ್ಯೆ ಮಾಡಿಕೊಂಡ ಮಂಗಳೂರು ಮೂಲದ ಮಹಿಳೆ

ಬೆಂಗಳೂರು ಎಪ್ರಿಲ್ 21: ಮಂಗಳೂರು ಮೂಲದ ಗೃಹಿಣಿಯೊಬ್ಬರು ತನ್ನ 5 ವರ್ಷದ ಮಗನನ್ನು ನೇಣು ಬಿಗಿದು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


ಮೃತರನ್ನು ಮಂಗಳೂರು ಮೂಲದ ರೋಹಿಣಿ ಶೆಟ್ಟಿ ಹಾಗೂ ಸಿಯಾನ್ ಶೆಟ್ಟಿ ಎಂದು ಗುರುತಿಸಲಾಗಿದ್ದು, ಎಪ್ರಿಲ್ 17ರಂದು ಈ ದುರ್ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. 36 ವರ್ಷದ ರೋಹಿಣಿ ತನ್ನ ಪತಿ‌ ಪ್ರವೀಣ್ ಹಾಗೂ ಮಗನ ಜೊತೆ ಹುಳಿಮಾವು‌ ಪೊಲೀಸ್ ಠಾಣಾ ವ್ಯಾಪ್ತಿಯ ಬಸವನಪುರ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು.

ಪ್ರವೀಣ್ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ರೋಹಿಣಿ ತಾಯಿ 12 ವರ್ಷಗಳ ಹಿಂದೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದರು. ಆಗಿನಿಂದಲೂ ರೋಹಿಣಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಮದುವೆಯಾದ ಬಳಿಕವೂ ಎರಡ್ಮೂರು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು‌ ಎಂದು ತಿಳಿದುಬಂದಿದೆ.

ಈ ನಡುವೆ ಎಪ್ರಿಲ್ 17ರಂದು ರಾತ್ರಿ ಊಟವಾದ ಬಳಿಕ ಪ್ರತ್ಯೇಕ ಕೊಠಡಿಯಲ್ಲಿ ತಾಯಿ-ಮಗ ಮಲಗಿದ್ದರು. ಪತಿ ಪ್ರವೀಣ್ ಮತ್ತೊಂದು ಕೋಣೆಯಲ್ಲಿ ಮಲಗಿದ್ದರು. ಮರುದಿನ ಬೆಳಗ್ಗೆ ಪ್ರವೀಣ್, ಹೆಂಡತಿ-ಮಗ ಮಲಗಿದ್ದ ರೂಮಿನ ಬಾಗಿಲು ತಟ್ಟಿದ್ದಾರೆ. ಆದರೆ ಎಷ್ಟು ಹೊತ್ತಾದರೂ ರೋಹಿಣಿ ಬಾಗಿಲು ತೆರೆದಿಲ್ಲ. ತಕ್ಷಣವೇ ಸ್ಥಳೀಯರ ಸಹಾಯದಿಂದ ಬಾಗಿಲು ಮುರಿದು ನೋಡಿದಾಗ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಸದ್ಯ ಘಟನೆ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *