Connect with us

    FILM

    ಖ್ಯಾತ ನಟ ಧನುಷ್ ವಿರುದ್ದ ತಿರುಗಿ ಬಿದ್ದ ನಿರ್ಮಾಪಕರು….!!

    ಚೆನ್ನೈ ಜುಲೈ 03: ತಮಿಳಿನ ಖ್ಯಾತ ನಟ ಧನುಷ್ ವಿರುದ್ದ ಇದೀಗ ನಿರ್ಮಾಪಕರು ತಿರುಗಿ ಬಿದ್ದಿದ್ದು, ಮುಂಗಡ ಹಣ ನೀಡಿದ್ದರೂ ಇದೀಗ ಶೂಟಿಂಗ್ ಬರುತ್ತಿಲ್ಲ ಎಂಬ ದೂರು ದಾಖಲಾಗಿದೆ.


    ಮೊನ್ನೆಯಷ್ಟೇ ಚೆನ್ನೈನ ಅಣ್ಣಾಸಾಲೈನಲ್ಲಿ ನಡೆದ ನಿರ್ಮಾಪಕರ ಹಾಗೂ ಕಲಾವಿದರ ಸಂಘದ ಸಭೆಯಲ್ಲಿ ಅನೇಕ ನಿರ್ಮಾಪಕರು ಕಲಾವಿದರ ಮೇಲೆ ಆರೋಪ ಮಾಡಿದ್ದಾರೆ. ಅದರಲ್ಲೂ ಪ್ರಮುಖವಾಗಿ ಧನುಷ್, ರಾಯ್ ಲಕ್ಷ್ಮಿ , ಅಮಲಾ ಪೌಲ್  ವಿರುದ್ಧವೂ ದೂರು ದಾಖಲಾಗಿದೆ.

    ತೇನಾಂಡಾಲ್ ಫಿಲ್ಮ್ ಸಂಸ್ಥೆಯು ಧನುಷ್ ಗಾಗಿ ಚಿತ್ರವೊಂದನ್ನು ನಿರ್ಮಾಣ ಮಾಡುತ್ತಿದೆ. ಒಂದು ತಿಂಗಳ ಕಾಲ ಶೂಟಿಂಗ್ ಕೂಡ ನಡೆದಿದೆ. ಕಾರಣಾಂತರಗಳಿಂದ ಶೂಟಿಂಗ್ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಶೂಟಿಂಗ್ ಮಾಡುವಂತೆ ಧನುಷ್ ಗೆ ಮನವಿ ಮಾಡಲಾಗಿದೆ. ಆದರೆ, ಅವರು ಸ್ಪಂದಿಸುತ್ತಿಲ್ಲ ಎಂದು ದೂರಿನಲ್ಲಿದೆ. ಈ ಸಿನಿಮಾಗಾಗಿ ಸಂಸ್ಥೆಯು 20 ಕೋಟಿ ರೂಪಾಯಿಯನ್ನು ಧನುಷ್ ಗೆ ನೀಡಿದೆಯಂತೆ.


    ಕಾಲ್ ಶೀಟ್ ನೀಡದೇ ಇರುವುದು ಒಂದು ಸಮಸ್ಯೆಯಾದರೆ, ಕೆಲ ನಟಿಯರು ಚಿತ್ರೀಕರಣಕ್ಕೆ ಬಂದರೆ, ಅವರಿಗೆ ಹತ್ತು ಜನ ಸೆಕ್ಯೂರಿಟಿ ಗಾರ್ಡ್ ಗಳು ಬೇಕೆಂದು ಹೇಳುತ್ತಾರಂತೆ. ಇದರಿಂದಾಗಿ ಭಾರೀ ಮೊತ್ತದ ಹಣವನ್ನೇ ಸಂಸ್ಥೆಯು ನೀಡಬೇಕಾಗಿದೆ. ಇದನ್ನು ತಪ್ಪಿಸುವಂತೆ ಫಿಲ್ಮ್ ಚೇಂಬರ್ ಗೆ ಕೆಲವು ನಿರ್ಮಾಪಕರು ಪತ್ರ ಬರೆದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply