LATEST NEWS
ಮಂಗಳೂರು – ಹಣ ಕೋಡುತ್ತೇನೆ ಬರುತ್ತೀರಾ ಎಂದು ಕೇಳಿದ ಯುವಕನ ಹಿಡಿದು ಪೊಲೀಸರಿಗೆ ಒಪ್ಪಿಸಿದ ಯುವತಿಯರು
ಮಂಗಳೂರು ಸೆಪ್ಟೆಂಬರ್ 24: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರಿಗೆ ಕಿರುಕುಳ ನೀಡಿದ ಅಪರಿಚಿತನ ವಿರುದ್ದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮಂಗಳೂರಿನ ನವಭಾರತ್ ಸರ್ಕಲ್ ಬಳಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರಿಗೆ ಆರೋಪಿ ಹತ್ತಿರ ಬಂದು ಹಣ ಕೋಡುತ್ತೇನೆ ಬರುತ್ತೀರಾ ಎಂದು ಕೇಳಿದ ಎಂದು ಆರೋಪಿಸಲಾಗಿದೆ.
ಇದರಿಂದ ಸಿಟ್ಟಿಗೆದ್ದ ಯುವತಿಯರು ಯುವಕನ ಹಿಡಿದುಕೊಂಡು ಆತನಿಗೆ ಮಂಗಳಾರತಿ ಮಾಡಿದ್ದಾರೆ. ಅಲ್ಲದೆ ಆತನ ಶರ್ಟ್ ಬಿಚ್ಚಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಶಬರಿ ಎಂದು ಗುರುತಿಸಲಾಗಿದೆ. ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login