Connect with us

    KARNATAKA

    ಹಾಸನ – ಭೀಕರ ರಸ್ತೆ ಅಪಘಾತಕ್ಕೆ ನಾಲ್ಕು ಮಕ್ಕಳು ಸೇರಿ 9 ಮಂದಿ ಬಲಿ

    ಹಾಸನ ಅಕ್ಟೋಬರ್ 16: ಹಾಸನ ಬಳಿ KSRTC ಬಸ್​, ಟ್ಯಾಂಕರ್​​, ಟಿಟಿ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ಮಕ್ಕಳು ಸೇರಿದಂತೆ 9 ಮಂದಿ ಬಲಿಯಾಗಿದ್ದಾರೆ.


    ಅರಸೀಕೆರೆ ತಾಲ್ಲೂಕಿನ ಬಾಣಾವರ ಬಳಿ ಶನಿವಾರ ಮಧ್ಯರಾತ್ರಿ ಈ ಘಟನೆ ಸಂಭವಿಸಿದೆ. ಮೃತರಲ್ಲಿ ಅವರಲ್ಲಿ ನಾಲ್ವರು ಮಹಿಳೆಯರು, ಒಬ್ಬ ಪುರುಷ ಹಾಗೂ ನಾಲ್ವರು ಮಕ್ಕಳು ಸೇರಿದ್ದಾರೆ. ಮೃತರನ್ನು ಹಾಸನ ಜಿಲ್ಲೆಯ ಲೀಲಾವತಿ ರಮೇಶ್‌ (50), ಚೈತ್ರಾ ಶ್ರೀನಿವಾಸ (33), ವಂದನಾ ಗಂಗಣ್ಣ (20), ಭಾರತಿ ದೊಡ್ಡಯ್ಯ (50), ದೊಡ್ಡಯ್ಯ ಪಾಪಣ್ಣ (60), ಸಂಪತ್‌ (10), ಡಿಂಪಿ (12), ತನ್ಮಯಿ (10), ಧ್ರುವ (2) ಎಂದು ಗುರುತಿಸಲಾಗಿದೆ. ಟೆಂಪೋ ಟ್ರಾವೆಲ್ಲರ್‌ನಲ್ಲಿ 14 ಜನರು ಪ್ರಯಾಣಿಸುತ್ತಿದ್ದು, 9 ಜನರು ಮೃತಪಟ್ಟಿದ್ದಾರೆ. ಉಳಿದ ಐವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಬಸ್ ಚಾಲಕ ಸೇರಿದಂತೆ ಬಸ್‌ನಲ್ಲಿದ್ದ ಐವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಹಾಸನದ ಹಿಮ್ಸ್‌ಗೆ ದಾಖಲಿಸಲಾಗಿದೆ


    ಹಾಲಿನ ಟ್ಯಾಂಕರ್‌ ಚಾಲಕ ಡೈವರ್ಸನ್‌ ಫಲಕವನ್ನು ಗಮನಿಸಿದೇ, ತಪ್ಪು ದಾರಿಯಲ್ಲಿ ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಮೃತರು ಧರ್ಮಸ್ಥಳದಿಂದ ಹಾಸನಾಂಬೆ ದರ್ಶನ ಮಾಡಿಕೊಂಡು ವಾಪಸ್ ತಮ್ಮ ಊರಿಗೆ ತೆರಳುತ್ತಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply