Connect with us

KARNATAKA

ಪ್ರತ್ಯೇಕ ಪ್ರಕರಣದಲ್ಲಿ ಹಾಸನ ಮೂಲದ ಇಬ್ಬರು ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವು

ಹಾಸನ ಜೂನ್ 26: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಏರಿಕೆಯಾಗುತ್ತಲೇ ಇದೆ. ಈವರೆಗೆ 12ಕ್ಕೂ ಅಧಿಕ ಮಂದಿ ಹೃದಯಾಘಾತದಿಂದ ಸಾವನಪ್ಪಿದ್ದಾರೆ, ಹಾಸನ ಜಿಲ್ಲೆಯ ಸದ್ಯ ಬೆಂಗಳೂರಿನಲ್ಲಿ ವಾಸವಿರುವ ಇಬ್ಬರು ಪ್ರತ್ಯೇಕ ಪ್ರಕರಣದಲ್ಲಿ ಹೃದಯಾಘಾತದಿಂದ ಸಾವನಪ್ಪಿದ್ದಾರೆ.

ನಿನ್ನೆ (ಜೂನ್ 25) ಸಂಜೆ ಅಷ್ಟೇ ಹಾಸನ ಮೂಲದ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದರೆ, ಮತ್ತೋರ್ವ ಹಾಸನ ಮೂಲದ ಯುವತಿ ಬೆಂಗಳೂರಿನಲ್ಲಿ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಇದರೊಂದಿಗೆ ಹಾಸನದವರು ಒಂದೇ ತಿಂಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.


ಸುಪ್ರಿಯಾ (22) ಎಂಬ ಯುವತಿ ಮೂಲತ ಹಾಸನ ಜಿಲ್ಲೆಯವರಾಗಿದ್ದು, ಸದ್ಯ  ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ವಾಸವಿದ್ದರು. ಮುಕ್ತ ವಿವಿಯಲ್ಲಿ ಪದವಿ ವ್ಯಾಸಂಗ ಮಾಡ್ತಿದ್ದ ಸುಪ್ರಿಯಾ ವಿದ್ಯಾಭ್ಯಾಸದ ಜೊತೆಗೆ ಕೆಲಸ ಮಾಡುತ್ತಿದ್ದಳು. ನಿನ್ನೆ ಮನೆಯಲ್ಲಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಪೋಷಕರಿಗೆ ಹೇಳಿ ಕುಸಿದು ಬಿದ್ದಿದ್ದಾಳೆ. ತಕ್ಷಣ ಪೋಷಕರು ಸುಪ್ರಿಯಾಳನ್ನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

 

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಎಂ ಹೊನ್ನೇನಹಳ್ಳಿ ಗ್ರಾಮದ 32 ವರ್ಷದ ಯೋಗೇಶ್​ ಬೆಂಗಳುರಿನಲ್ಲಿ ನಿನ್ನೆ(ಜೂನ್ 25) ಹೃದಯಾಘಾತದಿಂದ ಸಾವನ್ನಪ್ಪಿದ್ದರು. ನಾಲ್ಕು ವರ್ಷಗಳ ಹಿಂದೆ ಅಷ್ಟೇ ವಿವಾಹವಾಗಿದ್ದ ಯೋಗೇಶ್​ ಬೆಂಗಳೂರಿನಲ್ಲಿ ಆಟೋ ಓಡಿಸಿಕೊಂಡು ಲಗ್ಗೆರೆಯಲ್ಲಿ ವಾಸವಿದ್ದ. ಆದ್ರೆ, ಬುಧವಾರ ಬೆಳಗ್ಗೆ ಆಟೋ ಓಡಿಸಿ ಮನೆಗೆ ಬಂದು ಮಲಗಿದ್ದು, ಕೊಠಡಿಯಲ್ಲೇ ಮಲಗಿದ್ದಲ್ಲಿಯೇ ಸಾವನ್ನಪ್ಪಿದ್ದಾನೆ. ಬಳಿಕ ಆಸ್ಪತ್ರೆಗೆ ಹೋದಾಗ ವೈದ್ಯರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಖಚಿತಪಡಿಸಿದ್ದಾರೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *