Connect with us

KARNATAKA

ಹಾಸನ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಸುಚಿತ್ರಾ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಹಾಸನ ನವೆಂಬರ್ 25: ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಸ್ ಡಿಸಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನದ ರಕ್ಷಣಾಪುರಂನಲ್ಲಿ ನಡೆದಿದೆ.


ಮೃತಳನ್ನು ಸುಚಿತ್ರಾ (31) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪತಿ ಕೃಷ್ಣಮೂರ್ತಿ ವಿಲೇಜ್ ಅಕೌಂಟೆಂಟ್ ಆಗಿದ್ದರು. ಕಳೆದ ಮೂರು ವರ್ಷಗಳ ಹಿಂದೆ ನಡೆದ ಅಪಘಾತದಲ್ಲಿ ಅವರು ಪತಿಯನ್ನು ಕಳೆದುಕೊಂಡಿದ್ದರು. ಪತಿ ಮರಣದ ನಂತರ ಸುಚಿತ್ರಾಗೆ ಎಸ್‍ಡಿಎ ಹುದ್ದೆ ನೀಡಲಾಗಿತ್ತು. ಜಿಲ್ಲಾಧಿಕಾರಿ ಕಛೇರಿ ಗ್ರಾಮ ಒನ್ ಕೇಂದ್ರದಲ್ಲಿ ಸುಚಿತ್ರಾ ಎಸ್‍ಡಿಎ ಆಗಿ ಕೆಲಸ ಮಾಡುತ್ತಿದ್ದರು.

ಸುಚಿತ್ರಾಗೆ ಒಂದು ಹೆಣ್ಣುಮಗುವಿದ್ದು ರಕ್ಷಣಾಪುರಂನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಶುಕ್ರವಾರ ಮಗಳು ಶಾಲೆ ಮುಗಿಸಿ ವಾಪಸ್ ಬಂದು ಮನೆಯ ಬಾಗಿಲು ಬಡಿದಿದ್ದು ಬಾಗಿಲು ತೆರೆಯದಿದ್ದಾಗ ತನ್ನ ಮಾವನಿಗೆ ಕರೆ ಮಾಡಿದ್ದಾರೆ. ನಂತರ ಮಾವ ಆಗಮಿಸಿ ಮನೆಯ ಬಾಗಿಲು ಮುರಿದು ಒಳಪ್ರವೇಶಿಸಿ ನೋಡಿದಾಗ ಸುಚಿತ್ರಾ ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದರು. ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *