KARNATAKA
ಹಾಸನ -ಹೇಮಾವತಿ ನದಿ ನೀರಿನಲ್ಲಿ ಮುಳುಗಿ ಸಾವನಪ್ಪಿದ ನಿತ್ಯ..!!
ಹಾಸನ ಡಿಸೆಂಬರ್ 25: ಅಂಜನೇಯ ಸ್ವಾಮಿ ದರ್ಶನ ಮಾಡಿ ಹೇಮಾವತಿ ನದಿ ಹಿನ್ನೀರಿನಲ್ಲಿ ಆಟವಾಡುತ್ತಿದ್ದ ಯುವತಿಯೊಬ್ಬಳು ಆಕಸ್ಮಿಕವಾಗಿ ಮುಳುಗಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಗೊರೂರಿನ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ನಡೆದಿದೆ.
ಮೃತ ಯುವತಿಯನ್ನು ಗೊರೂರು ಅರಳಿಕಟ್ಟೆ ಗ್ರಾಮದ ಗಿರೀಶ್ ಎಂಬವರ ಪುತ್ರಿ ನಿತ್ಯ (19) ಎಂದು ಗುರುತಿಸಲಾಗಿದೆ.
ಹನುಮ ಜಯಂತಿ ಪೂಜೆಗಾಗಿ ಸಂಬಂಧಿಕರೊಂದಿಗೆ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಯುವತಿ ತೆರಳಿದ್ದಳು. ಈ ವೇಳೆ ಪೂಜೆ ಸಲ್ಲಿಸಿ ಹೇಮಾವತಿ ಹಿನ್ನೀರಿನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ. ಯುವತಿಯ ಮೃತದೇಹಕ್ಕಾಗಿ ಅಗ್ನಿಶಾಮಕದಳದಿಂದ ಶೋಧಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೊರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
You must be logged in to post a comment Login