Connect with us

KARNATAKA

ಎರಡು ತಿಂಗಳ ಅಂತರದಲ್ಲಿ ಹಾಸನ ಜಿಲ್ಲೆಗೆ ಸೇರಿದ ನಾಲ್ವರು ಹಾರ್ಟ್ ಅಟ್ಯಾಕ್ ಗೆ ಬಲಿ – ಆತಂಕಕ್ಕೆ ಕಾರಣವಾದ ನಿಶಾಂತ್ ಸಾವು

ಹಾಸನ, ಜೂನ್​ 11: ಹಾಸನ ಜಿಲ್ಲೆಗೆ ಸೇರಿದ ನಾಲ್ವರು ಎರಡು ತಿಂಗಳ ಅಂತರದಲ್ಲಿ ಹೃದಯಾಘಾತದಿಂದ ಸಾವನಪ್ಪಿದ್ದು ಇದೀಗ ಆತಂಕಕ್ಕೆ ಕಾರಣವಾಗಿದೆ. ಇದೀಗ ಇಂದು ಹಾಸನ ಮೂಲದ ಓರ್ವ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.


ಬೆಂಗಳೂರಿನ ಜೆ.ಪಿ.ನಗರದಲ್ಲಿ ಸ್ನೇಹಿತರೊಂದಿಗೆ ವಾಸವಾಗಿದ್ದ 19 ವರ್ಷದ ನಿಶಾಂತ್ ಗೌಡ ಮೃತ ದುರ್ದೈವಿ. ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದ ನಿವಾಸಿಯಾಗಿರುವ ನಿಶಾಂತ್ ಗೌಡ ಡಿಪ್ಲೋಮಾ ಓದಿದ್ದರು. 15 ದಿನಗಳ ಹಿಂದೆ ಹಾಸನದಿಂದ ಬೆಂಗಳೂರಿಗೆ ಕೈಗಾರಿಕಾ ತರಬೇತಿಗೆಂದು ಬಂದಿದ್ದರು.

 

ಬೆಂಗಳೂರಿನಲ್ಲಿ ನಿಶಾಂತ್ ಗೌಡ ಫುಡ್ ಡೆಲಿವರಿ ಕೆಲಸ ಮಾಡಿಕೊಂಡಿದ್ದರು. ಕಳೆದ ರಾತ್ರಿ ನಿಶಾಂತ್​ ಗೌಡ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಈ ವಿಚಾರವನ್ನು ಸ್ನೇಹಿತರಿಗೆ ತಿಳಿಸಿ, ಮಲಗಿಕೊಂಡಿದ್ದಾರೆ. ಬೆಳಗ್ಗೆ ಎಷ್ಟೊತ್ತಾದರೂ ನಿಶಾಂತ್​ ನಿದ್ದೆಯಿಂದ ಎದ್ದಿರಲಿಲ್ಲ. ಸ್ನೇಹಿತರು ಎಬ್ಬಿಸಲು ಮುಂದಾಗ ನಿಶಾಂತ್ ಮೃತಪಟ್ಟಿರುವುದು ಗೊತ್ತಾಗಿದೆ. ಈ ವಿಚಾರ ತಿಳಿದ ಜೆಪಿ ನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.

ಹಾಸನ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಐವರು ಯುವಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೆಲವತ್ತಿ ಗ್ರಾಮದ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಕವನ ಕೆ.ವಿ., ಹೊಳೆನರಸೀಪುರದ ಮಡಿವಾಳ ಬಡಾವಣೆಯ ಸಂಧ್ಯಾ ಅರಕಲಗೂಡು ತಾಲೂಕಿನ ಕಾಡನೂರು ಗ್ರಾಮದ ಅಭಿಷೇಕ್ ಮತ್ತು ಹಾಸನ ತಾಲೂಕಿನ ಅಗಲಹಳ್ಳಿ ಕೊಪ್ಪಲು ಗ್ರಾಮದ ನವೀನ್ ಕುಮಾರ್ (21) ಹೃದಯಾಘಾತಕ್ಕೆ ಬಲಿಯಾಗಿದ್ದರು. ಇದೀಗ ನಿಶಾಂತ್ ಸಾವು ಆತಂಕ ಹೆಚ್ಚಿಸಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *