Connect with us

    KARNATAKA

    ತಲೆನೋವು ಗುಣಪಡಿಸುತ್ತೇನೆಂದು ಬೆತ್ತದ ಏಟು ಕೊಟ್ಟ ಪೂಜಾರಿ..ಮಹಿಳೆ ಸಾವು

    ಹಾಸನ : ತಲೆನೋವು ಗುಣಪಡಿಸುವುದಾಗಿ ಅರ್ಚಕನೊಬ್ಬ ಬೆತ್ತದ ಕೋಲಿನಿಂದ ಮಹಿಳೆಯ ತಲೆಗೆ ಹಾಗೂ ದೇಹದ ಭಾಗಗಳಿಗೆ ಹೊಡೆದ ಪರಿಣಾಮ ಮಹಿಳೆ ಸಾವನಪ್ಪಿರುವ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ.


    ಮೃತ ಮಹಿಳೆಯನ್ನು ಪಾರ್ವತಿ (47) ಎಂದು ಗುರುತಿಸಲಾಗಿದ್ದು, ಇವರು ಕಳೆದ ಕೆಲವು ದಿನಗಳಿಂದ ತಲೆನೋವಿನಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಇವರ ತಲೆ ನೋವು ಮಾತ್ರ ಕಡಿಮೆಯಾಗಿರಲ್ಲಿಲ್ಲ. ಈ ಹಿನ್ನಲೆ ದೇವರ ಮೊರೆ ಹೋಗಿದ್ದರು. ನೀವು ಗುಣಮುಖರಾಗಲು ಪೂಜೆ ಮಾಡಿಸಬೇಕು ಎಂದು ಮಹಿಳೆಗೆ ಪೂಜಾರಿ ತಿಳಿಸಿದ್ದಾರೆ. ಪೂಜೆ ಮಾಡಿ ತಲೆನೋವು ಗುಣಪಡಿಸುವುದಾಗಿ ಹೇಳಿ ಮಹಿಳೆ ತಲೆಗೆ ಪೂಜಾರಿ ಬೆತ್ತದಿಂದ ಹೊಡೆದಿದ್ದಾರೆ.

     

    ಪೂಜಾರಿಯು ಬೆತ್ತದಿಂದ ತಲೆಗೆ ಹೊಡೆದ ಪರಿಣಾಮ ಮಹಿಳೆ ಅಸ್ವಸ್ಥಗೊಂಡಿದ್ದಾರೆ. ತೀವ್ರ ಅಸ್ವಸ್ಥಗೊಂಡ ಆಕೆ ಚಿಕಿತ್ಸೆ ಫಲಕಾರಿಯಾಗದೇ ಹಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆ ನಂತರ ಪೂಜಾರಿ ನಾಪತ್ತೆಯಾಗಿದ್ದಾನೆ. ಈ ಸಂಬಂಧ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply