LATEST NEWS
ಟಿಪ್ಪುವಿಗಿಂತ ದೊಡ್ಡ ಮತಾಂಧ ಸಿದ್ದರಾಮಯ್ಯ- ನಳಿನ್ ಕುಮಾರ್ ಕಟೀಲ್
ಟಿಪ್ಪುವಿಗಿಂತ ದೊಡ್ಡ ಮತಾಂಧ ಸಿದ್ದರಾಮಯ್ಯ- ನಳಿನ್ ಕುಮಾರ್ ಕಟೀಲ್
ಮಂಗಳೂರು ನವೆಂಬರ್ 09: ಟಿಪ್ಪು ಸುಲ್ತಾನ್ ಗಿಂತ ದೊಡ್ಡ ಮತಾಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ . ಮುಖ್ಯಮಂತ್ರಿ ಕುಮಾರಸ್ವಾಮಿ ಟಿಪ್ಪುವಿನ ಜಯಂತಿ ಬದಲು ಸಿದ್ದರಾಮಯ್ಯ ಅವರ ಜಯಂತಿ ಮಾಡಲಿ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿಟಿಪ್ಪು ಜಯಂತಿ ಆಚರಣೆ ಯನ್ನು ವಿರೋಧಿಸಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಟಿಪ್ಪು ಜಯಂತಿ ಕಾರ್ಯಕ್ರಮ ದಲ್ಲಿ ಹೆಸರು ಹಾಕಿಸಿಕೊಂಡಿಲ್ಲ. ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಕಾರ್ಯಕ್ರಮದಲ್ಲಿ ನೇರ ಭಾಗವಹಿಸದೇ ಆಚೆಯೂ ಅಲ್ಲ ಇಚೇಯೂ ಅಲ್ಲ ಎಂಬುದನ್ನು ತೋರಿಸಿದ್ದಾರೆ . ಆಚೆ ಗಂಡೂ ಅಲ್ಲ ಹೆಣ್ಣೂ ಅಲ್ಲ ಎಂಬುವುದನ್ನು ತೋರಿಸಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.
ಟಿಪ್ಪುವಿನ ಖಡ್ಗ ತಂದ ವಿಜಯ ಮಲ್ಯ ಸೋತು ಸುಣ್ಣವಾದರು. ಟಿಪ್ಪು ಜಯಂತಿ ಆಚರಣೆ ಜಾರಿಗೆ ತಂದ ಸಿದ್ಧರಾಮಯ್ಯ ಅಧಿಕಾರ ಕಳೆದುಕೊಂಡಿದ್ದಾರೆ. ಇನ್ನು ಮುಂದೆ ಕುಮಾರಸ್ವಾಮಿ ಯೂ ಅಧಿಕಾರ ಕಳೆದು ಕಾಡಿಗೆ ಹೋಗಲಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
You must be logged in to post a comment Login