LATEST NEWS
ಹೃದಯಾಘಾತದಿಂದ ಸಾವನಪ್ಪಿದ ಉರ್ವ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇ ಬಲ್ ಸಿದ್ಧಾರ್ಥ್
ಮಂಗಳೂರು ಅಕ್ಟೋಬರ್ 2: ಉರ್ವ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇ ಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ಧಾರ್ಥ್ ಜೆ (41) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಮೂಲತಃ ಪುತ್ತೂರು ತಾಲೂಕಿನ ಈಶ್ವರಮಂಗಲದವರಾಗಿದ್ದು, ನಗರದ ಪೊಲೀಸ್ ಕ್ವಾರ್ಟ್ರಸ್ನಲ್ಲಿ ವಾಸವಿದ್ದರು. ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ.
ಶುಕ್ರವಾರ ರಾತ್ರಿ ಕರ್ತವ್ಯದಲ್ಲಿದ್ದ ಸಿದ್ಧಾರ್ಥ್ ಅವರಲ್ಲಿ ಅನಾರೋಗ್ಯ ಕಂಡುಬಂದಿತ್ತು. ಸಹೋದ್ಯೋ ಗಿಗಳು ಮನೆಗೆ ಹೋಗಲು ಹೇಳಿದ್ದರು. ನಂತರ ಮನೆಗೆ ತೆರಳಿದ್ದ ಸಿದ್ಧಾರ್ಥ್ ಶನಿವಾರ ನಸುಕಿನಜಾವ 3 ಗಂಟೆ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದೆ.ಅವರನ್ನು ನಗರದ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಅಸುನೀಗಿದ್ದಾರೆ. ಅವರು ಹೃದಯಾಘಾ ತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
You must be logged in to post a comment Login