BELTHANGADI
ಕಲಾವಿದ ರಘುರಾಮ್ ಶೆಟ್ಟಿ ಹೃದಯಾಘಾತದಿಂದ ನಿಧನ
ಬೆಳ್ತಂಗಡಿ ಡಿಸೆಂಬರ್ 03: ಖ್ಯಾತ ಕಲಾವಿದ ಕೃಷಿಕ ರಘುರಾಮ್ ಶೆಟ್ಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು,
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಗಂಪದಡ್ಡ ನಿವಾಸಿ ರಘುರಾಮ್ ಶೆಟ್ಟಿ (58) ಡಿಸೆಂಬರ್ 2 ರಂದು ರಾತ್ರಿ ಮನೆಯಲ್ಲಿ ಹೃದಯಾಘಾತವಾಗಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಈ ವೇಳೆ ವೈದ್ಯರು ಪರೀಕ್ಷಿಸಿದಾಗ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ದೃಢಪಡಿಸಿದ್ದಾರೆ.
ಡಿ.2 ರಂದು ರಾತ್ರಿ ಸುಮಾರು 10 ಗಂಟೆ ವೇಳೆಗೆ ಮನೆಯಲ್ಲಿ ಊಟ ಮಾಡಿ ನಂತರ ನೀರು ಕುಡಿಯಲು ಹೋದಾಗ ಏಕಾಏಕಿ ನೆಲಕ್ಕೆ ಬಿದ್ದಿದ್ದು ತಕ್ಷಣ ಮನೆಯವರು ಆಸ್ಪತ್ರೆಗೆ ದಾಖಲಿಸಿದಾಗ ಹೃದಯಾಘಾತದಿಂದ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಉತ್ತಮ ಕಲಾವಿದರಾಗಿರುವ ಇವರು ಚಲನಚಿತ್ರ, ಧಾರವಾಹಿ ಸೇರಿದಂತೆ ನಾಟಕಗಳಲ್ಲಿ ನಟಿಸಿರುವ ರಘುರಾಮ್ ಶೆಟ್ಟಿಯವರು ಮನೆಯಲ್ಲಿ ಕೃಷಿಕರಾಗಿದ್ದರು ಇವರಿಗೆ ಪತ್ನಿ ಹಾಗೂ ಒಬ್ಬ ಪುತ್ರ ಇದ್ದು ಪುತ್ರ ವಿದ್ಯಾಭ್ಯಾಸ ಮಾಡುತ್ತಿದ್ದಾನೆ.
You must be logged in to post a comment Login