KARNATAKA
ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಹೃದಯಾಘಾತಕ್ಕೆ ಬಲಿಯಾದ ಉಪ ತಹಶಿಲ್ದಾರ್
ಶಿವಮೊಗ್ಗ ಎಪ್ರಿಲ್ 06: ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಉಪ ತಹಶಿಲ್ದಾರ್ ಹೃದಯಾಘಾತಕ್ಕೆ ಒಳಗಾಗಿ ಸಾವನಪ್ಪಿರುವ ಘಟನೆ ಸೊರಬ ತಾಲೂಕಿನ ಆನವಟ್ಟಿಯಲ್ಲಿ ನಡೆದಿದೆ.
ಮೃತರನ್ನು ಉಪ ತಹಶೀಲ್ದಾರ್ ಚನ್ನಕೇಶವ ಎಂದು ಗುರುತಿಸಲಾಗಿದ್ದು. ಇವರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿಯ ನಾಡಕಚೇರಿಯಲ್ಲಿ ಇಂದು ಎಂದಿನಂತೆ ಕರ್ತವ್ಯ ನಿರ್ವಹಿಸುತ್ತಿದ್ದರು. ಮಧ್ಯಾಹ್ನ ಊಟದ ನಂತ್ರ, ತಮ್ಮ ಸ್ಥಳದಲ್ಲಿಯೇ ಕುಳಿತಿದ್ದಂತ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆನವಟ್ಟಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ, ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
You must be logged in to post a comment Login