LATEST NEWS
ಉಡುಪಿ – ಮೆಹಂದಿ ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿದ್ದ ಸಂದರ್ಭ ಹೃದಯಾಘಾತದಿಂದ ಸಾವು
ಉಡುಪಿ ಜೂನ್ 22: ಮದುವೆಯ ಮೆಹಂದಿ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಸಂದರ್ಭ ಹೃದಯಾಘಾತಕ್ಕೆ ಒಳಗಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಡುಪಿಯ ಅಂಬಾಗಿಲು ವಿನಲ್ಲಿ ನಡೆದಿದೆ.
ಮೃತಪಟ್ಟವರನ್ನು ಗಣಪತಿ ಆಚಾರ್ಯ (56) ಎಂದು ಗುರುತಿಸಲಾಗಿದೆ. ಮನೆಯ ಬಳಿ ನಡೆಯುತಿದ್ದ ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಇವರು ನೃತ್ಯ ಮಾಡುತಿದ್ದ ಸಂಧರ್ಭದಲ್ಲಿ ಯೇ ಕುಸಿದು ಬಿದ್ದಿದ್ದರು. ತಕ್ಷಣವೇ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ಯುಲಾಯಿತಾದರೂ ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಗಣಪತಿ ಆಚಾರ್ಯ ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು.
ಗಣಪತಿ ಆಚಾರ್ಯ ಅವರು ಚಿನ್ನದ ಆಭರಣ ತಯಾರಿಕೆಯ ಜೊತೆಗೆ ಪಿಗ್ಮಿ ಸಂಗ್ರಾಹಕರಾಗಿಯೂ ಕಾರ್ಯನಿರ್ವಹಿಸುತಿದ್ದರು.
You must be logged in to post a comment Login