Connect with us

KARNATAKA

ಗುಡ್ ನ್ಯೂಸ್ ಕೊಟ್ಟ ಹವಾಮಾನ ಇಲಾಖೆ – ದೇಶದಲ್ಲಿ ಬಿಸಿಗಾಳಿ ಅಂತ್ಯ

ನವದೆಹಲಿ ಮೇ 09 : ಬಿಸಿಲಿನ ಬೇಗೆಯಿಂದ ಬಳಲುತ್ತಿರುವ ಜನರಿಗೆ ಹವಾಮಾನ ಇಲಾಖೆ ಒಂದು ಗುಡ್ ನ್ಯೂಸ್ ಕೊಟ್ಟಿದ್ದು. ದೇಶದಲ್ಲಿ ಬಿಸಿಗಾಳಿ ಅಂತ್ಯಗೊಳ್ಳುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ವಿಜ್ಞಾನಿ ಸೋಮಾ ಸೇನ್‌ ತಿಳಿಸಿದ್ದಾರೆ.


ಆದರೆ ಮೇ 10 ರಂದು ರಾಜಸ್ಥಾನದ ಪಶ್ಚಿಮ ಭಾಗದಲ್ಲಿ ಮಾತ್ರ ಬಿಸಿಗಾಳಿ ಇರಲಿದೆ. ಹೀಗಾಗಿ ಅಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬಂಗಾಳಕೊಲ್ಲಿಯಿಂದ ದೇಶದೊಳಗೆ ತೇವಾಂಶಭರಿತ ಗಾಳಿ ಬೀಸಲಿದ್ದು, ದೇಶದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಬಿಸಿಗಾಳಿ ಇರುವ ಕಡೆ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಗುಡ್ಡಗಾಡು ಪ್ರದೇಶದಲ್ಲಿ 30 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಬಿಸಿಗಾಳಿ ಎನ್ನುವುದು ಗಾಳಿಯ ಉಷ್ಣತೆಯ ಸ್ಥಿತಿಯಾಗಿದ್ದು ಅದು ಉಂಟಾದಾಗ ಮಾನವನ ದೇಹಕ್ಕೆ ಮಾರಕವಾಗುತ್ತದೆ ಎಂದು ಐಎಂಡಿ ಹೇಳಿದೆ. ಕಳೆದ ಕೆಲವು ತಿಂಗಳುಗಳಿಂದ ದೇಶದಲ್ಲಿ ಬಿಸಿಗಾಳಿ, ತಾಪಮಾನದ ಏರಿಕೆಯಿಂದಾಗಿ ಜನರು ತತ್ತರಿಸಿದ್ದರು.ಹಲವು ರಾಜ್ಯಗಳಲ್ಲಿ ಬರ ಜನರನ್ನು ಹೈರಾಣಗೊಳಿಸಿತ್ತು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *