LATEST NEWS
ಇನ್ನು ಮೂರು ದಿನ ಇದೆ ಮಳೆ ಆರ್ಭಟ…ಇಂದು ಕರಾವಳಿಯಲ್ಲಿ ರೆಡ್ ಅಲರ್ಟ್
ಮಂಗಳೂರು ಅಗಸ್ಟ್ 10: ಕರಾವಳಿ ಜಿಲ್ಲೆಗಳಲ್ಲಿ ಮಳೆ ಸದ್ಯ ನಿಲ್ಲುವ ಸಾಧ್ಯತೆ ಕಡಿಮೆ ಇದ್ದು, ಇನ್ನು ಮೂರು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದ್ದು, ಉಡುಪಿ, ದ.ಕ. ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಸೋಮವಾರ ರೆಡ್ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್ 13 ರವರೆಗೆ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಅಲ್ಲದೆ ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲೂ ಆಗಸ್ಟ್ 9 ರಿಂದ 13ರವರೆಗೆ ವರುಣ ಅಬ್ಬರಿಸಲಿದ್ದಾನೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಹಲವು ಮನೆಗಳಿಗೆ ಹಾನಿ ಉಂಟಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ನೇತ್ರವಾತಿ ನದಿಯು ಅಪಾಯದ ಮಟ್ಟ ಮೀರಿದೆ. ಕರಾವಳಿ ಭಾಗದ ಸಮುದ್ರಗಳಲ್ಲಿ ಅಲೆಗಳ ರಭಸವೂ ಕೂಡಾ ಹೆಚ್ಚಾಗಿದ್ದು ಮೀನುಗಾರರು ನೀರಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
You must be logged in to post a comment Login