Connect with us

    DAKSHINA KANNADA

    ಭಾರಿ ಮಳೆಗೆ ಸಂಪೂರ್ಣ ಹಾನಿಗೊಳಗಾದ ಮನೆಗಳು ಸಂಕಷ್ಟದಲ್ಲಿ ಕೊರೊನಾ ಸ್ಟೇ ಹೋಮ್

    ಭಾರಿ ಮಳೆಗೆ ಸಂಪೂರ್ಣ ಹಾನಿಗೊಳಗಾದ ಮನೆಗಳು ಸಂಕಷ್ಟದಲ್ಲಿ ಕೊರೊನಾ ಸ್ಟೇ ಹೋಮ್

    ಪುತ್ತೂರು ಮೆ.1 ಲಾಕ್ ಡೌನ್ ಹಿನ್ನಲೆಯಲ್ಲಿ ಜನರು ಮನೆಯಲ್ಲೇ ಇರಬೇಕು ಎನ್ನುವ ಸೂಚನೆಯನ್ನು ಸರಕಾರ ಈಗಾಗಲೇ ನೀಡಿದೆ. ಆದರೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ನಿನ್ನೆ ಸುರಿದ ಭಾರೀ ಮಳೆ-ಗಾಳಿಗೆ ಹತ್ತಕ್ಕೂ ಮಿಕ್ಕಿದ ಮನೆಗಳಿಗೆ ಸಂಪೂರ್ಣ ಹಾನಿಯಾಗಿದೆ.

     ಭಾರೀ ಗಾಳಿಗೆ ಹಲವು ಮನೆಗಳ ಮೇಲ್ಛಾವಣಿ ಹಾರಿ ಹೋಗಿದ್ದು, ಕೆಲವು ಮನೆಗಳ ಮೇಲೆ ಭಾರೀ ಗಾತ್ರದ ಮರಗಳು ಉರುಳಿದ ಪರಿಣಾಮ ಮನೆಯಲ್ಲಿ ನಿಲ್ಲದಂತಹ ಸ್ಥಿತಿ ನಿರ್ಮಾಣಗೊಂಡಿದೆ. ಜಿಲ್ಲೆಯ ಬೆಳ್ತಂಗಡಿ, ಪುತ್ತೂರು ಭಾಗದಲ್ಲಿ ಹೆಚ್ಚಿನ ಹಾನಿ ಸಂಭವಿಸಿದ್ದು, ಮನೆ ಮಂದಿ ನೆರೆಹೊರೆಯ ಮನೆಗಳನ್ನು ಆಶ್ರಯಿಸಬೇಕಾದ ಪರಿಸ್ಥಿತಿ ನಿರ್ಮಾಣಗೊಂಡಿದೆ.

    ಮಳೆ-ಗಾಳಿಯಿಂದ ಲಕ್ಷಾಂತರ ಮೌಲ್ಯದ ಹಾನಿ‌ ಸಂಭವಿಸಿದ್ದು, ಸಾವಿರಾರು ಸಂಖ್ಯೆಯ ಅಡಿಕೆ ಮರಗಳು ಧರೆಗುರುಳಿವೆ. ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಮನೆಯಲ್ಲೇ ಇರಬೇಕೆಂದು‌ ಬಯಸಿದವರಿಗೂ ನಿನ್ಮೆ ಸುರಿದ ಮಳೆ ಮನೆಯಲ್ಲೂ ನಿಲ್ಲದಂತಹ ಸ್ಥಿತಿ ನಿರ್ಮಾಣಗೊಂಡಿದೆ.

    Share Information
    Advertisement
    Click to comment

    You must be logged in to post a comment Login

    Leave a Reply