DAKSHINA KANNADA
ಭಾರೀ ಮಳೆ : ನಾಳೆ (ಜುಲೈ 7) ಶಾಲಾ-ಕಾಲೇಜಿಗೆ ರಜೆ ಘೋಷಣೆ

ಮಂಗಳೂರು, ಜುಲೈ 07: ಜಿಲ್ಲೆಯಲ್ಲಿ ಧಾರಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆಯೂ (ಜುಲೈ 7) ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಮಾಡಿದ್ದಾರೆ.
ಕರಾವಳಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಸುಮಾರು 204 ಮೀ.ಮೀ ಅಧಿಕ ಪ್ರಮಾಣ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ದ.ಕ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
