LATEST NEWS
ಭಾರಿ ಮಳೆ ಹಿನ್ನಲೆ ನಾಳೆ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ
ಭಾರಿ ಮಳೆ ಹಿನ್ನಲೆ ನಾಳೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ
ಮಂಗಳೂರು ಅಗಸ್ಟ್ 10: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಿನ್ನಲೆ ನಾಳೆ (ಅಗಸ್ಟ್ 11) ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕರಾವಳಿಯಲ್ಲಿ ಇಂದು ಭಾರಿ ಮಳೆ ಸುರಿದ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ನಾಳೆ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಮಳೆಯಿಂದ ಯಾವುದೇ ಅನಾಹುತವಾಗಿಲ್ಲ ಅಲ್ಲದೆ ಈಗ ಸುರಿಯುತ್ತಿರುವ ಮಳೆ ಮಳೆಗಾಲದ ಸಾಮಾನ್ಯ ಮಳೆಯಾಗಿದ್ದು ಆದರೂ ಮುಂಜಾಗೃತ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ನಾಳೆ ಶನಿವಾರ ಅರ್ಧ ದಿನ ಶಾಲಾ ಕಾಲೇಜುಗಳು ಇರೋದ್ರಿಂದ ರಜೆ ಘೋಷಿಸಿಲಾಗಿದೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಕಟಣೆ ತಿಳಿಸಿದೆ.
ಕಳೆದೆರಡು ದಿನಗಳಿಂದ ಪಶ್ಚಿಮಘಟ್ಟ ಸೇರಿದಂತೆ ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಇಂದು ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು, ಜಿಲ್ಲೆಯ ನದಿಗಳು ಅಪಾಯಮಟ್ಟ ದಲ್ಲಿ ಹರಿಯುತ್ತಿದೆ. ಕೆಲವು ಕಡೆಗಳಲ್ಲಿ ನೆರೆ ಭೀತಿ ಕೂಡ ಉಂಟಾಗಿದೆ. ಅಲ್ಲದೆ ಹವಮಾನ ಇಲಾಖೆ ಇನ್ನು ಮೂರು ದಿನಗಳ ಕಾಲ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ತಿಳಿಸಿದೆ.
You must be logged in to post a comment Login