LATEST NEWS
ಮಳೆ ಅಬ್ಬರ – ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ(ಜುಲೈ 1) ರಜೆ
ಮಂಗಳೂರು ಜೂನ್ 30: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಈ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ನಾಳೆ (ಜುಲೈ 1 ) ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ ಆರೆಂಜ್ ಅಲರ್ಟ್ ಆಗಿದ್ದು, ಈ ಮಧ್ಯೆಯೂ ಮಳೆ ಬಿರುಸಾಗಿದೆ. ಮಂಗಳೂರು ನಗರ ಸೇರಿದಂತೆ ನಾನಾ ಕಡೆ ಮಹಾಮಳೆಗೆ ಜಲಾವೃತವಾಗಿದೆ. ನಾಳೆಯ ವರೆಗೆ ಹವಮಾನ ಇಲಾಖೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ನಾಳೆ ಧಾರಾಕಾರ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಎಲ್ಲಾ ಅಂಗನವಾಡಿ ಕೇಂದ್ರ, ಶಾಲೆ-ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಜಿಲ್ಲಾಡಳಿತವು ರಜೆ ಘೋಷಣೆ ಮಾಡಿದೆ. ವಿಪರೀತ ಮಳೆ ಮತ್ತು ಜಿಲ್ಲೆಯ ವಿವಿಧೆಡೆ ಕೃತಕ ನೆರೆ ಉಂಟಾದ ಹಿನ್ನೆಲೆಯಲ್ಲಿ ಇಂದು ಕೆಲವು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
You must be logged in to post a comment Login