Connect with us

LATEST NEWS

ಬಿಸಿಲ ಬೇಗೆ ನಡುವೆ ಕರಾವಳಿಯಲ್ಲಿ ಮಳೆ…..!!

ಮಂಗಳೂರು ಸೆಪ್ಟೆಂಬರ್ 05: ಜುಲೈ ತಿಂಗಳ ಬಳಿಕ ಸಂಪೂರ್ಣ ಕಣ್ಮರೆಯಾಗಿದ್ದ ಮಳೆರಾಯ ಇದೀಗ ಮತ್ತೆ ಸಪ್ಟೆಂಬರ್ ನಲ್ಲಿ ಬಂದಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ ಕರಾವಳಿಯಲ್ಲಿ ಮತ್ತೆ ಮಳೆ ಪ್ರಾರಂಭವಾಗಿದೆ.


ಈ ಬಾರಿ ಕರಾವಳಿಯಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದು, ಈಗಾಗಲೇ ಕರಾವಳಿಯ ಜೀವನದಿಗಳು ನೀರಿಲ್ಲದೆ ಸೊರಗುತ್ತಿವೆ. ಜುಲೈ ಬಳಿಕ ಅಗಸ್ಟ್ ತಿಂಗಳಲ್ಲಿ ಸರಿಯಾದ ಮಳೆಯೇ ಆಗಿರಲಿಲ್ಲ. ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ನಿನ್ನೆಯಿಂದ ಮೋಡ ಕವಿದ ವಾತಾವಾರಣವಿದ್ದು, ಇಂದು ಬೆಳಿಗ್ಗೆಯಿಂದಲೇ ಮಳೆ ಪ್ರಾರಂಭವಾಗಿದೆ.


ಮುಂದಿನ 24 ಗಂಟೆಗಳಲ್ಲಿ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 7 ಮತ್ತು 8 ರಂದು ದಕ್ಷಿಣ ಒಳನಾಡು ಉಡುಪಿ, ಕೊಡಗು, ಚಾಮರಾಜನಗರ, ಮೈಸೂರ್ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *