Connect with us

    LATEST NEWS

    ಮಲೆನಾಡಿನಲ್ಲಿ ಮಳೆ ಅಬ್ಬರ – ಶಿವಮೊಗ್ಗ-ಮಂಗಳೂರು ಹೆದ್ದಾರಿ ಕೂಡ ಬಂದ್

    ವಮೊಗ್ಗ ಜುಲೈ 23: ಮಲೆನಾಡಿನಲ್ಲಿ ಮುಂಗಾರು ಮಳೆ ಆರ್ಭಟ ಮಂದುವರೆದಿದ್ದು, ಸುರಿಯುತ್ತಿರುವ ಬಾರೀ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಇದೀಗ ಶಿವಮೊಗ್ಗ-ಮಂಗಳೂರು ಹೆದ್ದಾರಿ ಕೂಡ ಬಂದ್ ಮಾಡಲಾಗಿದೆ.


    ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಮೀಪದ ಶಿವರಾಜಪುರ ಬಳಿ ಹಳ್ಳಕ್ಕೆ ಹಿಮ್ಮುಖವಾಗಿ ತುಂಗಾ ನದಿ ನೀರು ನುಗ್ಗಿದ್ದು, ಸೇತುವೆ ಮೇಲೆ ಸುಮಾರು ನಾಲ್ಕು ಅಡಿಗೂ ಹೆಚ್ಚಿನ ಮಟ್ಟದಲ್ಲಿ ನೀರು ಹರಿಯುತ್ತಿದೆ. ಸೇತುವೆ ಮೇಲೆ ನೀರು ಹರಿಯುತ್ತಿದ್ದರು, ಗ್ಯಾಸ್ ಸಿಲಿಂಡರ್ ತುಂಬಿಕೊಂಡಿದ್ದ ಲಾರಿಯೊಂದನ್ನು ಚಲಾಯಿಸಿಕೊಂಡು ಹೋಗಲು ಯತ್ನಿಸಿದ್ದ ಲಾರಿ ಚಾಲಕ ಲಾರಿ ಸಮೇತ ಸಿಕ್ಕಿಹಾಕಿಕೊಂಡಿದ್ದು, ತುಂಗೆಯ ರಂಭಸಕ್ಕೆ ಕೊಟ್ಟಿಕೊಂಡು ಹೋಗುವ ಸ್ಥಿತಿಯಲ್ಲಿದೆ.

    ಸದ್ಯ ಲಾರಿಯನ್ನು ಬಿಟ್ಟು ಚಾಲಕ ಸುರಕ್ಷಿತ ಸ್ಥಳಕ್ಕೆ ಸೇರಿಕೊಂಡಿದ್ದಾನೆ. ಇದೇ ರೀತಿ ಮಳೆ ಮುಂದುವರಿದಲ್ಲಿ ನೀರಿನಲ್ಲಿ ಲಾರಿ ಕೊಚ್ಚಿ ಹೋಗುವ ಸಾಧ್ಯತೆಯೂ ಇದೆ. ಅಲ್ಲದೆ ಯಾವುದಾದರೂ ಬೇರೆ ವಾಹನ ಸೇತುವೆ ಮೇಲೆ ಸಾಗಲು ಯತ್ನಿಸಿದರೆ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇರುವುದರಿಂದ ಸೇತುವೆ ಮೇಲೆ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಪರಿಣಾಮವಾಗಿ ಶಿವಮೊಗ್ಗ-ಮಂಗಳೂರು ರಾಷ್ಟ್ರೀ ಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ. ಪ್ರಯಾಣಿಕರಿಗೆ ಬೊಬ್ಬಿ ಮೂಲಕ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply