Connect with us

LATEST NEWS

ಉಡುಪಿ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ – ರೆಡ್ ಅಲರ್ಟ್ ಘೋಷಣೆ

ಮಂಗಳೂರು ಅಗಸ್ಟ್ 4: ಕೊರೊನಾ ಲಾಕ್ ಡೌನ್ ನಡುವೆ ಜೂನ್​ ಹಾಗೂ ಜುಲೈ ತಿಂಗಳಲ್ಲಿ ಅಂದುಕೊಂಡ ಮಟ್ಟಿಗೆ ಈ ಬಾರಿ ಮಳೆ ಆಗಿಲ್ಲ. ಈ ಅವಧಿಯಲ್ಲಿ ಶೇ.25-40 ರಷ್ಟು ಮಳೆಯ ಕೊರತೆ ಆಗಿದೆ ಎಂಬುದ ತಜ್ಞರ ಅಭಿಪ್ರಾಯ. ಆದರೆ ಈಗ ಆಗಸ್ಟ್​ಬರುತ್ತಿದ್ದಂತೆ ಮಾನ್ಸೂನ್ ಚುರುಕಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಮಳೆಯಾಗುತ್ತಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ  ಅಗಸ್ಟ್ 4 ಮತ್ತು 5ರಂದು ಭಾರಿಯಿಂದ ಅತೀ ಭಾರಿ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. 204.5 ಮೀಮೀ.ಗಿಂತ ಅಧಿಕ ಮಳೆ ಬೀಳುವ ನಿರೀಕ್ಷೆಯಿದೆ. ಪ್ರವಾಸಿಗರು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ನದಿ ತೀರದ ವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ ಅಗಸ್ಟ್ 4ರಂದು ಮಧ್ಯಾಹ್ನ 1 ಗಂಟೆಯಿಂದ ಅಗಸ್ಟ್ 5ರಂದು ಬೆಳಗ್ಗೆ 8.30ರ ತನಕ ರೆಡ್ ಅಲರ್ಟ್ ಇದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆ ಬರುತ್ತಿದೆ. ಹವಾಮಾನ ಇಲಾಖೆ ಮುಂದಿನ ಒಂದು ವಾರ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಅಬ್ಬರದ ಮಳೆ ಆಗಲಿದೆ ಎಂದು ತಿಳಿಸಿದೆ. ಕಳೆದ ಬಾರಿಯೂ ಆಗಸ್ಟ್​ ತಿಂಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆ ಆಗಿತ್ತು. ಇದರಿಂದ ಅನೇಕ ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು.


ನಿನ್ನೆ ರಾತ್ರಿಯಿಂದಲೇ ಸುರಿಯುತ್ತಿರುವ ಬಿರುಗಾಳಿ ಸಹಿತ ಮಳೆಗೆ ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆ ಹಾನಿ ಸಂಭವಿಸಿದೆ. ವಿಟ್ಲದ ಕೊಳ್ನಾಡು ಗ್ರಾಮದ ರಾಜ್ಯ ಹೆದ್ದಾರಿ 101 ಹಾದು ಹೋಗುವ ಕರೈ ಎಂಬಲ್ಲಿ ಇಂದು ಮುಂಜಾನೆ ಬೀಸಿದ ಬಾರೀ ಗಾಳಿ ಮಳೆಗೆ ಹಲವಾರು ಮರಗಳು ಬೃಹತ್ ಮರಗಳು ವಿದ್ಯುತ್ ಕಂಬಗಳ ಮೇಲೆ ಬಿದ್ದು,ಹಲವು ಕಂಬಗಳು ಹಾಗೂ ಮರಗಳು ರಾಜ್ಯ ಹೆದ್ದಾರಿಗೆ ಉರುಳಿದ ಪರಿಣಾಮ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಡಕಾಗಿದೆ.

ಮಂಗಳೂರಿನ ಮುಗ್ರೋಡಿ ಎಂಬಲ್ಲಿ‌ ಬೃಹತ್ ಮರವೊಂದು ಇಂದು ಮುಂಜಾನೆ ಸರಿ ಸುಮಾರು 7 ಘಂಟೆಗೆ ಮನೆಯ‌ ಮೇಲೆ ಬಿದ್ದದರಿಂದ ಮನೆಗೆ ಸ್ವಲ್ಪ‌ಮಟ್ಟಿನ ಹಾನಿಯಾಗಿದೆ. ಬೆಳಗಿನ ಜಾವ ಆದ ಕಾರಣ ಯಾರಿಗೂ ಯಾವುದೇ ರೀತಿಯ ತೊಂದರೆಯಾಗಲಿಲ್ಲ. ಉಡುಪಿ ಜಿಲ್ಲೆಯಲ್ಲೂ ಕೂಡ ಒಂದೇ ಸಮನೆ ಮಳೆ ಸುರಿಯುತ್ತಿದ್ದು, ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ನೆರೆ ಪ್ರವಾಹ ಪರಿಸ್ಥಿತಿ ಬಂದಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *