Connect with us

LATEST NEWS

ಭಾರೀ ಮಳೆ ಹಿನ್ನಲೆ ನಾಳೆ (ಜೂನ್ 13) ಉಡುಪಿ ಜಿಲ್ಲೆಯಲ್ಲಿ ಅಂಗನವಾಡಿಯಿಂದ ಫ್ರೌಢ ಶಾಲೆಗಳಿಗೆ ರಜೆ

ಉಡುಪಿ ಜೂನ್ 12: ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ ದಂದು (ಜೂನ್ 13) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

ಉಳಿದಂತೆ ಎಲ್ಲಾ ಪದವಿ ಪೂರ್ವ, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. 


ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಳಕಂಡ ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಮರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದೆ.

1. ವಿಧ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವ ಹಾಗಿಲ್ಲ
2. ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂಧರ್ಭದಲ್ಲಿ ಯಾವುದೇ ಅಪಾಯವಿಲ್ಲವೇ ಸುರಕ್ಷಿತವಾಗಿ ತಲುಪುವ ಬಗ್ಗೆ, ಗಮನವಹಿಸುವುದು.
3. ಕಠಿಣವಾದ ದಾರಿ ಎಂದರೆ ತೋಡು ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಸುರಕ್ಷಿತವಾಗಿ ಇರುವಂತೆ ಸೂಚಿಸಲು ತಿಳಿಸಿದೆ.
4. ದುರ್ಬಲ/ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ, ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು
5. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ನೀರು ಇರುವ ತನ್ನು ಪ್ರದೇಶ, ಕೆರೆ ತೀರ ಸಮುದ್ರತೀರಕ್ಕೆ ಹೋಗದಂತೆ ಜಾಗ್ರತೆ ವಹಿಸುವುದು.

6. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *