Connect with us

    DAKSHINA KANNADA

    ಮುಂದಿನ 5 ದಿನ ದ.ಕ ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ, ಮೀನುಗಾರರಿಗೆ ಎಚ್ಚರಿಕೆ ರವಾನೆ

    ಬೆಂಗಳೂರು, ಆಗಸ್ಟ್ 27 : ಮುಂದಿನ 5 ದಿನ  ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರ್ನಾಟಕ ಕರಾವಳಿ ಭಾರಿ ಮಳೆ ( heavy Rain) ಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

    ಈ ಸಂದರ್ಭ 12.5 ಸೆಂಟಿಮೀಟರ್ ನಿಂದ  20 ಸೆಂಟಿಮೀಟರ್ ವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಅದು ಎಚ್ಚರಿಸಿದೆ. ಇದೇ ವೇಳೆ ಗಾಳಿಯ ವೇಗವು ನಿರಂತರವಾಗಿ 30ರಿಂದ 40 kmph ತಲುಪುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಹೇಳಿದೆ. ಅತ್ತ ಮಲೆನಾಡು ಭಾಗದ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರರಡು ಸ್ಥಳಗಳಲ್ಲಿಯೂ ಭಾರಿ ಮಳೆಯಾಗಲಿದೆ. ಗಾಳಿಯ ವೇಗವು ನಿರಂತರವಾಗಿ 40ರಿಂದ 50 kmph ವೇಗ ತಲುಪುವ ಸಾಧ್ಯತೆಯಿದೆ.ಕರ್ನಾಟಕ ಕರಾವಳಿಯುದ್ದಕ್ಕೂ ಗಾಳಿಯ ವೇಗವು ಗಂಟೆಗೆ 35ರಿಂದ 45 ಕಿ.ಮೀ ವೇಗದಲ್ಲಿ 55 ಕಿ.ಮೀವರೆಗೆ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಕರ್ನಾಟಕದ ಬೆಳಗಾವಿ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆ ಮತ್ತು ಗಾಳಿಯ ವೇಗವು ನಿರಂತರವಾಗಿ 40ರಿಂದ 50 kmph ವೇಗ ತಲುಪುವ ಸಾಧ್ಯತೆಯಿದೆ. ಕೆಲವು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಚುರುಕಾಗಿದ್ದು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಮಂಗಳೂರು ಸೇರಿದಂತೆ ಕೆಲ ಸ್ಥಳಗಳಲ್ಲಿ ಮಂಗಳವಾರ  ಮದ್ಯಾಹ್ನ ಭಾರಿ ಮಳೆಯಾಗಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply