DAKSHINA KANNADA
ದುಷ್ಕರ್ಮಿಗಳಿಂದ ದಾಳಿಗೊಳಗಾದ ಐವನ್ ಡಿಸೋಜಾರ ನಿವಾಸಕ್ಕೆ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಭೇಟಿ..!
ಮಂಗಳೂರು : ಬುಧವಾರ ತಡರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ನಿವಾಸಕ್ಕೆ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಅವರು ಗುರುವಾರ ಸಂಜೆ ಭೇಟಿ ನೀಡಿ ಐವನ್ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ಐವನ್ ಡಿಸೋಜ ಕುಟುಂಬದ ಸದಸ್ಯರು ಸಭಾಧ್ಯಕ್ಷರಿಗೆ ದುಷ್ಕರ್ಮಿಗಳು ಮನೆ ಮೇಲೆ ನಡೆಸಿದ ದಾಳಿಯ ಘಟನೆಯ ಮಾಹಿತಿ ನೀಡಿದರು. ಇದೇ ಸಂದರ್ಭ ಕುಟುಂಬ ಸದಸ್ಯರಿಗೆ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಅವರು ಧೈರ್ಯ ತುಂಬಿದರು.
You must be logged in to post a comment Login