Connect with us

    LATEST NEWS

    ಅಕಾಲಿಕ ಮಳೆ, ಸಮುದ್ರದಲ್ಲಿ ಅಲೆಗಳ ಅಬ್ಬರ : ಕರಾವಳಿಯಲ್ಲಿ ಹೈ ಅಲರ್ಟ್

    ಅಕಾಲಿಕ ಮಳೆ, ಸಮುದ್ರದಲ್ಲಿ ಅಲೆಗಳ ಅಬ್ಬರ :ಕರಾವಳಿಯಲ್ಲಿ ಹೈ ಅಲರ್ಟ್

    ಮಂಗಳೂರು, ಎಪ್ರಿಲ್ 21 : ಕರಾವಳಿಯಲ್ಲಿ ಅಕಾಲಿಕ ಮಳೆ, ಸಮುದ್ರದಲ್ಲಿ ಅಲೆಗಳ ಅಬ್ಬರದ ಹಿನ್ನೆಲೆಯಲ್ಲಿ ಅವಿಭಜಿತ ದ.ಕ. ಜಿಲ್ಲೆಯಲ್ಲಿ ಮೀನುಗಾರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

    ಮೀನುಗಾರಿಕಾ ಇಲಾಖೆ ಈ ಬಗ್ಗೆ ಮೀನುಗಾರಿಗೆ ಮಾಹಿತಿ ರವಾನಿಸಿದೆ.

    ಇಂಡಿಯನ್ ನೇಶನಲ್ ಸೆಂಟರ್ ಫಾರ್ ಓಶಿಯನ್ ಇನ್ಪಾರ್ಮೇಷನ್ ಸಮುದ್ರದಲ್ಲಿ ತೆರೆಗಳ ಅಬ್ಬರ ಹೆಚ್ಚಾಗುವ ಮಾಹಿತಿ ನೀಡಿದೆ.

    ಮೀನುಗಾರರು ಈ ಬಗ್ಗೆ ಜಾಗೃತೆ ವಹಿಸಬೇಕೆಂದು ಅದು ಎಚ್ಚರಿಕೆ ನೀಡಿದೆ.

    ಪ್ರತೀ 17-22 ಸೆಕೆಂಡ್ ಗಳಿಗೊಮ್ಮೆ 2-3 ಮೀಟರ್ ಎತ್ತರದ ಅಲೆಗಳು ದಡಕ್ಕಪ್ಪಳಿಸುವ ಎಚ್ಚರಿಕೆ ನೀಡಿದೆ.

    ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶದಂತೆ ಮತ್ತು ಮೀನುಗಾರಿಕಾ ಇಲಾಖಾ ಸೂಚನೆ ಮೇರೆಗೆ ಈಗಾಗಲೇ ದಕ್ಕೆಯಲ್ಲಿ ಹಲವು ಬೋಟುಗಳು ಲಂಗರು ಹಾಕಿವೆ. ಸಮುದ್ರದಲ್ಲಿ ಅಪಾಯದ ಸೂಚನೆ ಹಿನ್ನಲೆಯಲ್ಲಿ ಅನೇಕ ಬೋಟುಗಳು ಮೀನುಗಾರಿಕೆ ಸ್ಥಗಿತಗೊಳಿಸಿ ಧಕ್ಕೆಗೆ ವಾಪಸ್ಸಾಗುತ್ತಿವೆ.

    ಈ ಬಗ್ಗೆ ಪ್ರತಿಕ್ರೀಯಿಸಿರುವ ದ.ಕ. ಜಿಲ್ಲಾಧಿಕಾರಿ .”ಅಕಾಲಿಕ ಮಳೆ‌ ಹಾಗೂ ಸಮುದ್ರದಲ್ಲಿ ಅಲೆಗಳ ಅಬ್ಬರವಿದೆ ಹೆಚ್ಚೇನು ಭಯಪಡುವಂತಹ ವಾತಾವರಣವಿಲ್ಲ, “ಆದರೂ ಮುನ್ನೆಚ್ಚರಿಕೆಯ ಸಲುವಾಗಿ ಬೋಟುಗಳನ್ನು ಕರೆಯಿಸಿಕೊಳ್ಳಲಾಗುತ್ತಿದೆ” ಎಂದು ಹೇಳಿದ್ದಾರೆ.
    ಈ ಬಾರಿ ಮೇ ತಿಂಗಳ ಕೊನೆಯ ವಾರ ಅಥವಾ ಜೂನ್ ಮೊದಲ ವಾರದಲ್ಲಿ ಮುಂಗಾರು ಕೇರಳ ಪ್ರವೇಶಿಸಲಿದೆ ಎಂದು ಭಾರತೀಯ ಹವಮಾನ ಇಲಾಖೆ ಈಗಾಗಲೇ ತಿಳಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply