Connect with us

LATEST NEWS

ಹಿಂಜಾವೆ ಜಿಲ್ಲಾಧ್ಯಕ್ಷ ರತ್ನಾಕರ ಶೆಟ್ಟಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಹಿಂಜಾವೆ ಜಿಲ್ಲಾಧ್ಯಕ್ಷ ರತ್ನಾಕರ ಶೆಟ್ಟಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು, ಜನವರಿ 9 : ಹಿಂದೂ ಜಾಗರಣ ವೇದಿಕೆ ಜಿಲ್ಲಾಧ್ಯಕ್ಷ ರತ್ನಾಕರ ಶೆಟ್ಟಿ ಅವರ ಗಡಿಪಾರು ಆದೇಶಕ್ಕೆ ರಾಜ್ಯ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿ ಆದೇಶಿಸಿದೆ. ಸರ್ಕಾರಕ್ಕೆ ಅಪೀಲು ಮಾಡುವವರೆಗೆ ಈ ಆದೇಶ ಊರ್ಜಿತದಲ್ಲಿರುತ್ತದೆ.

ಜಿಲ್ಲಾಧಿಕಾರಿ ನೀಡಿದ್ದ ಗಡಿಪಾರಿನ ಆದೇಶವನ್ನು ಪ್ರಶ್ನಿಸಿ ರತ್ನಾಕರ ಶೆಟ್ಟಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು. ಅವರ ಮನವಿಯನ್ನು ಪುರಸ್ಕರಿಸಿದ ಉಚ್ಚ ನ್ಯಾಯಾಲಯ ಗಡಿಪಾರಿನ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದು ಜಿಲ್ಲಾಡಳಿತಕ್ಕೆ ತೀವ್ರ ಹಿನ್ನಡೆಯಾದಂತಾಗಿದೆ.

ಪ್ರಕರಣದ ಹಿನ್ನಲೆ

ಕಳೆದ ವರ್ಷ ಜುಲೈ 13ರಂದು ಕಲ್ಲಡ್ಕದಲ್ಲಿ ರತ್ನಾಕರ ಶೆಟ್ಟಿಯವರ ಮೇಲೆ ನಡೆದ ಚೂರಿ ಇರಿತ ಹಾಗೂ ಹಲ್ಲೆ ಸಂದರ್ಭದಲ್ಲಿ ಗಾಯಗೊಂಡು ಪುತ್ತೂರಿನ ಖಾಸಗಿ ಆಸ್ಫತ್ರೆಯಲ್ಲಿ 2 ತಿಂಗಳುಗಳ ಕಾಲ ಚಿಕಿತ್ಸೆ ಪಡೆದಿದ್ದರು. ಇದೇ ಪ್ರಕರಣದಲ್ಲಿ ದಾಳಿ ಮಾಡಿದ ತಂಡ ಕೂಡಾ ರತ್ನಾಕರ ಶೆಟ್ಟಿ ಮೇಲೂ ಹಲ್ಲೆ ಯತ್ನ ಕೇಸು ದಾಖಲಿಸಿದ್ದರು. ಈ ಪ್ರಕರಣ ನಡೆದ ಕೆಲ ದಿನಗಳ ಬಳಿಕ ಅವರನ್ನು ಗಡಿಪಾರುಗೊಳಿಸುವ ಆದೇಶವನ್ನು ಜಿಲ್ಲಾಡಳಿತ ಕೈಗೊಂಡಿತ್ತು. ಆ ಗಡೀಪಾರು ಆದೇಶ ಮುಕ್ತಾಯವಾಗುತ್ತಿದ್ದಂತೆ ಮತ್ತೆ ಅವರನ್ನು ಗಡೀಪಾರು ಮಾಡಿ ಜಿಲ್ಲಾಡಳಿತ ಕಳೆದ ವಾರ ಆದೇಶ ಹೊರಡಿಸಿತ್ತು.

ದಕ ಜಿಲ್ಲೆ ಹಿಂದೂ ಜಾಗರಣೆ ವೇದಿಕೆಯ ಜಿಲ್ಲಾಧ್ಯಕ್ಷರಾದ ರತ್ನಾಕರ ಶೆಟ್ಟಿಯವರನ್ನು ಗಡಿಪಾರು ಮಾಡಿ ಹೊರಡಿಸಿದ್ದ ಆದೇಶವನ್ನು ಬಂಟ್ವಾಳ ಪೊಲೀಸರು ಕಾರ್ಯಗತಗೊಳಿಸಿದ್ದರು. ಡಿಸೆಂಬರ್‌ 30 ರಂದು ಅವರನ್ನು ವಶಕ್ಕೆ ಪಡೆದ ಬಂಟ್ವಾಳ ಪೊಲೀಸರು, ಅವರನ್ನು ಜಿಲ್ಲೆಯ ಗಡಿ ದಾಟಿಸಿ ಬಿಡುಗಡೆಗೊಳಿಸಿದ್ದರು. ಗಡಿಪಾರು ಆದೇಶ ವಜಾಗೊಳ್ಳುವವರೆಗೆ ಇನ್ನು ಅವರು ಜಿಲ್ಲೆಯ ಗಡಿ ಪ್ರವೇಶಿಸುವಂತಿರಲಿಲ್ಲ. ಆದರೆ ಉಚ್ಚ ನ್ಯಾಯಾಲಯದ ಈ ಆದೇಶದಿಂದ ರತ್ನಾಕರ ಶೆಟ್ಟಿಯವರು ಪ್ರಕರಣಕ್ಕೆ ಸಂಬಂಧಿಸಿ ಮುನ್ನಡೆ ಸಾಧಿಸಿದಂತಾಗಿದೆ. ಶೆಟ್ಟಿ ಪರ ಹೈಕೋರ್ಟ್ ವಕೀಲರಾದ ಅರುಣ್ ಶ್ಯಾಮ್ ವಾದಿಸಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *