Connect with us

    LATEST NEWS

    ಕಾಸರಗೋಡು ಗಡಿಯಲ್ಲಿ ಸಂಚಾರಕ್ಕೆ ನಿರ್ಬಂಧ – ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

    ಬೆಂಗಳೂರು ಫೆಬ್ರವರಿ 25: ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಕಾಸರಗೋಡು ಗಡಿ ಸಂಚಾರಕ್ಕೆ ನಿರ್ಬಂಧಗಳನ್ನು ಹೇರಿದ್ದ ಕೇಂದ್ರ,ರಾಜ್ಯ ಸರಕಾರಗಳಿಗೆ ರಾಜ್ಯ ಹೈ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.


    ​​2021ರ ಜನವರಿ 27ರಂದು ಅನ್‌ಲಾಕ್‌ 4.0 ಮಾರ್ಗ ಸೂಚಿಗಳನ್ನು ಕೇಂದ್ರ ಸರಕಾರ ಹೊರಡಿಸಿದೆ. ಅದರಲ್ಲಿ ಜನರ ಮತ್ತು ಪ್ರಯಾಣಿಕರ ಅಂತರ ರಾಜ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ಇಲ್ಲ. ಆದರೆ, ಫೆಬ್ರವರಿ 18ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯು ಕೇರಳದ ಕಾಸರಗೋಡು ಜಿಲ್ಲೆಯಿಂದ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವಜನಿಕರ ಸಂಚಾರ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ ಎಂದು ಹೈ ಕೋರ್ಟ್‌ಗೆ ನೀಡಿದ ಅರ್ಜಿಯಲ್ಲಿ ಹೇಳಲಾಗಿದೆ.

    ಅರ್ಜಿ ಕುರಿತು ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಕೇಂದ್ರ ಗೃಹ ಸಚಿವಾಲಯ, ರಾಜ್ಯ ಆರೋಗ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

    Share Information
    Advertisement
    Click to comment

    You must be logged in to post a comment Login

    Leave a Reply