LATEST NEWS
ಹಿಜಬ್ ತೀರ್ಪು ನೀಡಿದ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ….!!
ಬೆಂಗಳೂರು ಮಾರ್ಚ್ 20: ಶಾಲೆ ಕಾಲೇಜುಗಳಲ್ಲಿ ಹಿಜಬ್ ದಾರಣೆ ಕುರಿತಂತೆ ತೀರ್ಪು ಪ್ರಕಟಿಸಿದ ಕರ್ನಾಟಕದ ಹೈಕೋರ್ಟ್ ನ್ಯಾಯಾಧೀಶರಿಗೆ ತಮಿಳುನಾಡು ಮೂಲದ ಮತೀಯ ಸಂಘಟನೆ ಕೊಲೆ ಬೆದರಿಕೆ ಹಾಕಿದ್ದು, ಆರೋಪಿಗಳ ವಿರುದ್ದ ವಿಧಾನ ಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೌಹೀದ್ ಜಮಾತ್ ಸಂಘಟನೆಯ ಮುಖಂಡ ಆರ್.ರೆಹ್ಮತ್ವುಲ್ಲಾ ಮಧುರೈನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹಿಜಬ್ ತೀರ್ಪಿಗೆ ಆಕ್ಷೇಪ ವ್ಯಕ್ತಪಡಿಸಿ ಪರೋಕ್ಷವಾಗಿ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ಆಧಾರಿಸಿ ವಕೀಲ, ಸುಧಾ ಕಟ್ವ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಕರಣ ಸಂಬಂಧ ಐಪಿಸಿ ಸೆಕ್ಷನ್ 506(ಬೆದರಿಕೆ), 501(1)(ಮಾನಹಾನಿ), 503(ಕ್ರಿಮಿನಲ್ ಬೆದರಿಕೆ), 109(ಪ್ರಚೋದನೆ), 504(ಶಾಂತಿ ಭಂಗ), 505(ಸಾರ್ವಜನಿಕ ಕಿಡಿಗೇಡಿತನ) ಸೇರಿದಂತೆ ವಿವಿಧ ಸೆಕ್ಷನ್ಗಳಲ್ಲಿ ಎಫ್ಐಆರ್ ದಾಖಲಾಗಿದೆ. ಸದ್ಯ ಆರೋಪಿಗಳು ತಲೆ ಮರೆಸಿಕೊಂಡಿದ್ದು ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
You must be logged in to post a comment Login