Connect with us

KARNATAKA

ನ್ಯಾಯಾಂಗ ನಿಂದನೆ ಆರೋಪ -ಮಹೇಶ್ ಶೆಟ್ಟಿ ತಿಮರೋಡಿ ದಂಪತಿ ಹೈಕೋರ್ಟ್ ಗೆ ಹಾಜರು – ಮತ್ತೊಮ್ಮೆ ಬರಲು ಸೂಚನೆ

ಬೆಂಗಳೂರು ಜನವರಿ 06 : ಸೌಜನ್ಯ ಪ್ರಕರಣದಲ್ಲಿ ಧರ್ಮಸ್ಥಳದ ವಿರುದ್ದ ಮಾತನಾಡಿದ್ದಕ್ಕೆ ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಮಹೇಶ್‌ ಶೆಟ್ಟಿ ತಿಮರೋಡಿ ಹಾಗೂ ಪತ್ನಿ ಸರೋಜಾ ಹೈಕೋರ್ಟ್ ಮುಂದೆ ಹಾಜರಾಗಿದ್ದು, ನ್ಯಾಯಾಲಯ ಗುರುವಾರ ಮತ್ತೂಮ್ಮೆ ಖುದ್ದು ಹಾಜರಾಗುವಂತೆ ಹೈಕೋರ್ಟ್‌ ನಿರ್ದೇಶನ ನೀಡಿದೆ.


ಈ ವಿಚಾರವಾಗಿ ಬಬ್ಬುಕಟ್ಟೆ ಉಜಿರೆ ನಿವಾಸಿ ಜಯಪ್ರಕಾಶ ಶೆಟ್ಟಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಹಿರಿಯ ನ್ಯಾಯಮೂರ್ತಿ ಪಿ.ಎಸ್‌. ದಿನೇಶ್‌ ಕುಮಾರ್‌ ಹಾಗೂ ನ್ಯಾ| ಟಿ.ಜಿ. ಶಿವಶಂಕರೇ ಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಶುಕ್ರವಾರ ತಿಮರೋಡಿ ದಂಪತಿ ಹಾಜರಾಗಿದ್ದರು. ಇಬ್ಬರ ಹಾಜರಾತಿಯನ್ನು ದಾಖಲಿಸಿಕೊಂಡ ನ್ಯಾಯಪೀಠ, ಸಮಯದ ಅಭಾವದ ಕಾರಣ, ವಿಚಾರಣೆ ನಡೆಸದೆ ಮುಂದಿನ ಗುರುವಾರ ಪುನಃ ಬರುವಂತೆ ಹೇಳಿ ವಿಚಾರಣೆಯನ್ನು ಮುಂದೂಡಿತು. ಅರ್ಜಿದಾರರ ಪರ ವಕೀಲ ಚಂದ್ರನಾಥ್‌ ಕೆ. ಅರಿಗ ವಾದ ಮಂಡಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *