KARNATAKA
ಮೂವರು ನ್ಯಾಯಮೂರ್ತಿಗಳ ಪೀಠದಲ್ಲಿ ಇಂದು ಹಿಜಬ್ ವಿಚಾರಣೆ ಆರಂಭ
ಬೆಂಗಳೂರು ಫೆಬ್ರವರಿ 10: ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ರಿಟ್ ಅರ್ಜಿಗಳ ವಿಚಾರಣೆಯನ್ನು ಮುಖ್ಯನ್ಯಾಯ ಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದಲ್ಲಿ ಇಂದು ಆರಂಭಗೊಳ್ಳಲಿದೆ.
ಹಿಜಬ್ ವಿಚಾರದಲ್ಲಿ ಈಗಾಗಲೇ ರಾಜ್ಯಾದ್ಯಂತ ವಿವಾದ ತಾರಕಕ್ಕೇರಿದ್ದು, ವಿಧ್ಯಾರ್ಥಿಗಳು ತರಗತಿ ಇಲ್ಲದೆ ಮನೆಯಲ್ಲೇ ಇರುವಂತಾಗಿದೆ. ಈ ಹಿನ್ನಲೆ ಹಿಜಾಬ್ಗೆ (ಶಿರವಸ್ತ್ರ) ಸಂಬಂಧಿಸಿದಂತೆ ದಾಖಲಿಸಲಾಗಿರುವ ರಿಟ್ ಅರ್ಜಿಗಳನ್ನು ಮುಖ್ಯ ನ್ಯಾಯ ಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದಲ್ಲಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ಮಹಿಳಾ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರನ್ನು ಒಳಗೊಂಡ ಮೂವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೂರ್ಣಪೀಠ ಮಧ್ಯಾಹ್ನ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
You must be logged in to post a comment Login