Connect with us

    LATEST NEWS

    ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹಿಜಬ್ ವಿವಾದ…!!

    ದೆಹಲಿ : ಕರ್ನಾಟಕ ರಾಜ್ಯ ಹೈಕೋರ್ಟ್ ನೀಡಿರುವ ಮೌಖಿಕ ಆದೇಶವನ್ನು ಪ್ರಶ್ನಿಸಿ ಇದೀಗ ಅರ್ಜಿದಾರರು ಸುಪ್ರೀಂಕೊರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

    ಧಾರ್ಮಿಕ ಗುರುತು ಇರುವ ಬಟ್ಟೆಗಳನ್ನು ಶಾಲೆ-ಕಾಲೇಜುಗಳಲ್ಲಿ ಧರಿಸಬಾರದು, ಹಿಜಾಬ್ ಸಂಘರ್ಷ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 9ನೇ ತರಗತಿ ನಂತರ ಶಾಲೆ-ಕಾಲೇಜುಗಳನ್ನು ಪುನಾರಂಭ ಮಾಡಬೇಕೆಂದು ಹೈಕೋರ್ಟ್ ನಿನ್ನೆ ಮಧ್ಯಂತರ ಆದೇಶ ನೀಡಿತ್ತು.


    ಕರ್ನಾಟಕ ಹೈಕೋರ್ಟ್ ನಿನ್ನೆ ಗುರುವಾರ ನೀಡಿರುವ ಮೌಖಿಕ ಆದೇಶವನ್ನು ಪ್ರಶ್ನಿಸಿ ತಮ್ಮ ವಕೀಲರ ಮೂಲಕ ಅರ್ಜಿದಾರರು ಸುಪ್ರೀಂ ಕೋರ್ಟ್ ಗೆ(Supreme court) ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಸಂವಿಧಾನದ ಆಶಯಗಳಿಗೆ ವಿರುದ್ಧವಾದ, ಧಾರ್ಮಿಕ ಸ್ವಾತಂತ್ರ್ಯವನ್ನು ಪಾಲಿಸುವ ಹಕ್ಕನ್ನು ವಿರೋಧಿಸುವ ತೀರ್ಪನ್ನು ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ನೀಡಿದೆ ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply