LATEST NEWS
ಜನಿವಾರ ಬ್ರಾಹ್ಮಣರಿಗೆ ಎಷ್ಟು ಅತ್ಯಗತ್ಯವೋ ಹಿಜಾಬ್ ಕೂಡ ನಮಗೆ ಅಷ್ಟೇ ಅಗತ್ಯ – ಆಲಿಯಾ ಅಸಾದಿ

ಉಡುಪಿ ಎಪ್ರಿಲ್ 23: ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಯುವಂತೆ ಹೇಳಿ ವಿಧ್ಯಾರ್ಥಿಗಳ ಪರೀಕ್ಷೆ ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಜನಿವಾರ ಹಾಕಿದ ಕಾರಣಕ್ಕೆ ಪರೀಕ್ಷೆ ಬಹಿಷ್ಕರಿಸಲ್ಪಟ್ಟ ಬ್ರಾಹ್ಮಣನ ನೋವು ಮತ್ತು ಹಿಜಾಬ್ ಕಾರಣ ಪರೀಕ್ಷೆ ಬಹಿಷ್ಕಾರಕ್ಕೊಳಗಾದ ಮುಸ್ಲಿಂ ಹೆಣ್ಮಕ್ಕಳ ನೋವು ಒಂದೇ ಅಲ್ಲವೇ?
ಮತ್ಯಾಕೆ ತಾರತಮ್ಯ, ಜನಿವಾರ ಬ್ರಾಹ್ಮಣರಿಗೆ ಎಷ್ಟು ಅತ್ಯಗತ್ಯವೋ ಹಿಜಾಬ್ ಕೂಡ ನಮಗೆ ಅಷ್ಟೇ ಅಗತ್ಯ. ಇಲ್ಲಿ ಜನಿವಾರವನ್ನು ತಡೆದ ಅಧಿಕಾರಿಯನ್ನು ತಕ್ಷಣ ಸಸ್ಪೆಂಡ್ ಮಾಡ್ತಾರೆ ಹಿಜಾಬಿಗಳಿಗೆ ಕಾಲೇಜು ಗೇಟ್ ಬಂದ್ ಮಾಡಿದ ಅಧಿಕಾರಿಗೆ ಯಾವ ಶಿಕ್ಷೆಯೂ ಇಲ್ಲ.

ಬ್ರಾಹ್ಮಣ ವಿದ್ಯಾರ್ಥಿಗೆ ಉಚಿತ ಇಂಜಿನಿಯರ್ ಸೀಟ್ ನೀಡುತ್ತೀರಿ, ನಮ್ಮನ್ನು ಇದುವರೆಗೂ ಪರೀಕ್ಷೆ ಬರೆದಿದ್ದೀರೋ ಇಲ್ಲವೋ ಎಂದು ಸೌಜನ್ಯಕ್ಕಾದರೂ ಕೇಳಿಲ್ಲ, ಇದು ನಮ್ಮ ವ್ಯವಸ್ಥೆ.!! ಎಂದು ಪೋಸ್ಟ್ ಮಾಡಿದ್ದಾರೆ.